ವಂಶಾಡಳಿತ ದೇಶಕ್ಕೆ ಅಪಾಯಕಾರಿ: ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ರಾಹುಲ್ ನಕಾರ
ದೇಶದಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕಾಗಿದೆ ಎಂದು ಪ್ರಧಾನಿ ಕರೆ ನೀಡಿದ್ದರು.
Team Udayavani, Aug 15, 2022, 4:19 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕೆಂಪುಕೋಟೆಯಲ್ಲಿ (ಆಗಸ್ಟ್ 15) ಸ್ವಾತಂತ್ರ್ಯ ಅಮೃತ ಮಹೋತ್ಸವದ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ವೇಳೆ ಭ್ರಷ್ಟಾಚಾರ ಮತ್ತು ವಂಶಾಡಳಿತ ದೇಶಕ್ಕೆ ದೊಡ್ಡ ಅಪಾಯಕಾರಿ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಿರಾಕರಿಸಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಶಿವಮೊಗ್ಗ: ಸಾವರ್ಕರ್ –ಟಿಪ್ಪು ಫೋಟೋ ವಿಚಾರ: ಗುಂಪುಗಳ ನಡುವೆ ಹೊಡೆದಾಟ,144 ಸೆಕ್ಷನ್ ಜಾರಿ
ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ ಭಾರತ ಎದುರಿಸುತ್ತಿರುವ ಎರಡು ದೊಡ್ಡ ಸವಾಲುಗಳಾಗಿವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಭ್ರಷ್ಟಾಚಾರದ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಡುವ ಮೂಲಕ ದೇಶದಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕಾಗಿದೆ ಎಂದು ಪ್ರಧಾನಿ ಕರೆ ನೀಡಿದ್ದರು.
ವಂಶಾಡಳಿತ ಮತ್ತು ಕುಟುಂಬ ರಾಜಕಾರಣ ಕೇವಲ ರಾಜಕೀಯಕ್ಕೆ ಮತ್ರ ಸೀಮಿತವಾಗಿಲ್ಲ ಎಂದು ಪ್ರಧಾನಿ ಮೋದಿ ತಿಳಿಸಿದ್ದರು. ವಂಶಾಡಳಿತದಿಂದ ನಮ್ಮ ಹಲವು ವ್ಯವಸ್ಥೆಗಳ ಮೇಲೆ ಪರಿಣಾಮ ಬೀರಿದೆ. ಅಷ್ಟೇ ಅಲ್ಲ ಭ್ರಷ್ಟಾಚಾರ ಹೆಚ್ಚಳವಾಗಲೂ ಕಾರಣವಾಗಿದೆ ಎಂದು ಟೀಕಿಸಿದ್ದರು.
ಪ್ರಧಾನಿಯವರ ಈ ಹೇಳಿಕೆ ಕುರಿತು ರಾಹುಲ್ ಗಾಂಧಿಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ, ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಎಂದು ಹೇಳಿ ನುಣುಚಿಕೊಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು