ತಮಿಳುನಾಡಿನ ಅವನಿಯಪುರಂನಲ್ಲಿ ಜಲ್ಲಿಕಟ್ಟು ವೀಕ್ಷಿಸಿದ ರಾಹುಲ್ ಗಾಂಧಿ
Team Udayavani, Jan 14, 2021, 3:08 PM IST
ಮಧುರೈ: ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನ ಅವನಿಯಪುರಂನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ವೀಕ್ಷಿಸಿದರು.
ಪೊಂಗಲ್ ಹಬ್ಬದಲ್ಲಿ ಪಾಲ್ಗೊಳ್ಳಲೆಂದು ತಮಿಳುನಾಡಿಗೆ ಆಗಮಿಸಿದ ರಾಹುಲ್ ಗಾಂಧಿ ಜಲ್ಲಿಕಟ್ಟು ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು.
ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಭಾಷೆ, ಸಂಸ್ಕೃತಿಯನ್ನು ಬದಿಗಿರಿಸಿ, ತಮಿಳುನಾಡು ಜನರ ಮೇಲೆ ಒರಟು ಭಾವ ತೋರಿಸಬಹುದೆಂದು ಯೋಚಿಸುವವರಿಗೆ ಸಂದೇಶ ನೀಡಲು ನಾನಿಲ್ಲಿ ಬಂದಿದ್ದೇನೆ ಎಂದರು.
ಇದನ್ನೂ ಓದಿ:ಚರಗ ಚೆಲ್ಲಿ ಭೂತಾಯಿಗೆ ಭಕ್ತಿ ಸಮರ್ಪಣೆ : ರೈತ ಕುಟುಂಬಗಳಿಂದ ಸಡಗರದ ಎಳ್ಳ ಅಮಾವಾಸ್ಯೆ ಆಚರಣೆ
ಜಲ್ಲಿಕಟ್ಟು ಕ್ರೀಡೆ ನಡೆಸಲು ಇಲ್ಲಿ ಮಾಡಿರುವ ವ್ಯವಸ್ಥೆಗಳನ್ನು ನೋಡಿ ಸಂತೋಷವಾಗಿದೆ. ಇದರಿಂದ ಪ್ರಾಣಿಗೆ ಅಥವಾ ಯುವಕರಿಗೆ ಯಾರಿಗೂ ಅಪಾಯವಾಗುವುದಿಲ್ಲ ಎಂದು ರಾಹುಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ