ಸಮೃದ್ಧ ಭವಿಷ್ಯಕ್ಕಾಗಿ ಮತ ಹಾಕಿ.: ಹಿಮಾಚಲ ಪ್ರದೇಶದ ಜನತೆಗೆ ರಾಹುಲ್ ಮನವಿ
Team Udayavani, Nov 12, 2022, 11:49 AM IST
ಡೆಹ್ರಾಡೂನ್: ಹಿಮಾಚಲ ಪ್ರದೇಶದ ‘ಸಮೃದ್ಧ ಭವಿಷ್ಯ’ಕ್ಕಾಗಿ ಮತ ಚಲಾಯಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತದಾರರನ್ನು ಒತ್ತಾಯಿಸಿದ್ದಾರೆ.
ರಾಜ್ಯವು ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಲು ಮತ್ತು ಉದ್ಯೋಗವನ್ನು ಪಡೆಯಲು ಮತ ಚಲಾಯಿಸುತ್ತದೆ ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ಮತದಾನ ಇಂದು ನಡೆಯುತ್ತಿದೆ. ರಾಜ್ಯದ 55 ಲಕ್ಷಕ್ಕೂ ಹೆಚ್ಚು ಮತದಾರರು 68 ವಿಧಾನಸಭಾ ಕ್ಷೇತ್ರಗಳಲ್ಲಿ 412 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
‘ಹಿಮಾಚಲ ಪ್ರದೇಶವು ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಗೆ ಮತ ಹಾಕುತ್ತದೆ. ಹಿಮಾಚಲ ಪ್ರೇದೇಶವು ಉದ್ಯೋಗಕ್ಕಾಗಿ ಮತ ಚಲಾಯಿಸುತ್ತದೆ ಮತ್ತು ಹಿಮಾಚಲ ಪ್ರದೇಶವು ‘ಹರ್ ಘರ್ ಲಕ್ಷ್ಮಿ’ಗೆ ಮತ ಹಾಕುತ್ತದೆ’ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಪ್ರಸ್ತುತ ಮಹಾರಾಷ್ಟ್ರದಲ್ಲಿದ್ದು, ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ.
ಹಿಮಾಚಲ ಪ್ರದೇಶ ರಾಜ್ಯದಲ್ಲಿ ಶನಿವಾರ ಬಿಗಿ ಭದ್ರತೆಯ ನಡುವೆ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ. ಸಂಜೆ 5 ಗಂಟೆಯವರೆಗೆ ಮತದಾನ ಮಾಡಲಿರುವ ಒಟ್ಟು 55,92,828 ಮತದಾರರು ಕಣದಲ್ಲಿರುವ 412 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ