ಮುಂಬಯಿಯಲ್ಲಿ ರಾಹುಲ್‌ ಚೊಚ್ಚಲ ಪತ್ರಿಕಾಗೋಷ್ಠಿ: ಕೇವಲ 2.45 ನಿಮಿಷ


Team Udayavani, Jun 13, 2018, 4:13 PM IST

rahul-mumbai-press-meet-700.jpg

ಮುಂಬಯಿ : ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಇಂದು ಬುಧವಾರ ಮುಂಬಯಿಯಲ್ಲಿ ತನ್ನ ಚೊಚ್ಚಲ ಪತ್ರಿಕಾ ಗೋಷ್ಠಿಯನ್ನು ನಡೆಸಿದರು. ಆದರೆ ಅದು ಕೇವಲ 2 ನಿಮಿಷ 45 ಸೆಕೆಂಡುಗಳಿಗೆ ಸೀಮಿತವಾಯಿತು. ಕುತೂಹಲದಿಂದ ನೆರದಿದ್ದ ನೂರಕ್ಕೂ ಅಧಿಕ ಪತ್ರಕರ್ತರಿಗೆ ತೀವ್ರ ನಿರಾಶೆ ಉಂಟಾಯಿತು.

ಬಾಂದ್ರಾದ ತಾಣವೊಂದರಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ನ ರಾಜ್ಯ ಮತ್ತು ನಗರ ಘಟಕದ ಪದಾಧಿಕಾರಿಗಳು ಮಾಧ್ಯಮ ಮಾಹಿತಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಪತ್ರಕರ್ತರಿಗೆ ಅನೇಕ ಬಗೆಯ ನಿರ್ಬಂಧಗಳನ್ನು ವಿಧಿಸಲಾಯಿತು. 

ಅದಾಗಿ ಒಂದು ತಾಸಿನ ಬಳಿಕ ರಾಹುಲ್‌ ಗೋಷ್ಠಿಗೆ ಆಗಮಿಸಿದರು. ಆರಂಭಿಕ ಪರಿಚಯದ ಬಳಿಕ ಪತ್ರಕರ್ತರು ರಾಹುಲ್‌ಗೆ ಒಂದು ಪ್ರಶ್ನೆಯನ್ನು ಕೇಳಿದರು : 2019ರ ಲೋಕಸಭಾ ಚುನಾವಣೆಗಳಲ್ಲಿ ನೀವು ವಿರೋಧ ಪಕ್ಷಗಳ ಮೈತ್ರಿಕೂಟದ ನಾಯಕತ್ವವನ್ನು ವಹಿಸಲು ಬಯಸುತ್ತೀರಾ ?

ಈ ಪ್ರಶ್ನೆಗೆ ಉತ್ತರ ನೀಡುವ ಬದಲು ರಾಹುಲ್‌ ತಮ್ಮ ಎಂದಿನ ಶೈಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಜನತಾ ಪಾರ್ಟಿ ಮತ್ತು ಆರ್‌ಎಸ್‌ಎಸ್‌ ಬಗ್ಗೆ ಟೀಕಾ ಪ್ರಹಾರ ನಡೆಸಿದರು. ಇದು ಕೂಡ ಕೇವಲ ಎರಡು ನಿಮಿಷದಲ್ಲಿ ಮುಗಿದು ಹೋಯಿತು. ಅನಂತರ ರಾಹುಲ್‌ ದಿಢೀರನೆ ಎದ್ದು ನಿಂತು ಎಲ್ಲರಿಗೂ ಧನ್ಯವಾದ ಹೇಳಿ ತಮ್ಮ  ಚೊಚ್ಚಲ ಪತ್ರಿಕಾ ಗೋಷ್ಠಿಯನ್ನು ಇದ್ದಕ್ಕಿದ್ದಂತೆ ಮುಗಿಸಿದರು. 

ಅನೇಕ ಪತ್ರಕರ್ತರು ರಾಹುಲ್‌ ಪತ್ರಿಕಾಗೋಷ್ಠಿ ತಾಣವನ್ನು ನಿಗದಿತ ಸಮಯದೊಳಗೆ ತಲುಪಲು ಬೆಳಗ್ಗೆ 6 ಗಂಟೆಗೇ ತಮ್ಮ ಮನೆಯನ್ನು ಬಿಟ್ಟಿದ್ದರು. 

ಒಬ್ಬ ಕಾಂಗ್ರೆಸ್‌ ನಾಯಕ ಹೇಳಿದರು : “ರಾಹುಲ್‌ ಜೀ ಅವರಿಗೆ ನಾಗ್ಪುರ ಮತ್ತು ನಾಂದೇಡ್‌ಗೆ ಹೋಗುವುದಕ್ಕೆ ತಡವಾಗುತ್ತಿತ್ತು; ಅವರಿಗೆ ಇತರ ಕಾರ್ಯಕ್ರಮಗಳೂ ಇದ್ದವು’.

ಕಾಂಗ್ರೆಸ್‌ ನಾಯಕ ಸಂಜಯ್‌ ನಿರುಪಮ್‌ ಪತ್ರಕರ್ತರಲ್ಲಿ ಕ್ಷಮೆಕೋರಿ ಇದಕ್ಕೆ ಪಿಆರ್‌ ಟೀಮೇ ಕಾರಣ ಎಂದು ದೂರಿದರು. 

“ವಿದ್ಯುನ್ಮಾನ ಮಾಧ್ಯಮಕ್ಕೆ ರಾಹುಲ್‌ ಕೆಲವು ಬೈಟ್‌ಗಳನ್ನು ಮಾತ್ರವೇ ಕೊಡುತ್ತಾರೆ ಎಂದು ನಾವು ಮೊದಲೇ ತಿಳಿಸಿದ್ದೆವು; ರಾಹುಲ್‌ ಯಾವುದೇ ಪ್ರಶ್ನೆಗಳನ್ನು ಸ್ವೀಕರಿಸುವುದಿಲ್ಲ ಎಂದು ಮುದ್ರಣ ಮಾಧ್ಯಮದವರಿಗೆ ಸ್ಪಷ್ಟವಾಗಿ ಹೇಳಿದ್ದೆವು. ಕಾರ್ಯಕ್ರಮವು ವೇಳಾ ಪಟ್ಟಿಗೆ ಅನುಗುಣವಾಗಿ ನಡೆದಿದೆ’ ಎಂದು ನಿರುಪಮ್‌ ಮಾತು ಮುಗಿಸಿದರು. 

ಟಾಪ್ ನ್ಯೂಸ್

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.