ಮಸೂದ್‌ ಅಜರ್‌ಜೀ ಎಂದ ರಾಹುಲ್‌ ಗಾಂಧಿ


Team Udayavani, Mar 12, 2019, 12:30 AM IST

m-26.jpg

ಹೊಸದಿಲ್ಲಿ: ಪುಲ್ವಾಮಾ ದಾಳಿಯ ಸಂಚುಕೋರ ಜೈಶ್‌ ಎ ಮೊಹಮ್ಮದ್‌ ಉಗ್ರ ಮಸೂದ್‌ ಅಜರ್‌ನನ್ನು “ಜೀ’ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಸಂಬೋಧಿಸಿದ್ದು ವಿವಾದಕ್ಕೀಡಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರನ್ನು ಉದ್ದೇಶಿಸಿ ಸಭೆಯೊಂದರಲ್ಲಿ ಮಾತನಾಡಿದ ರಾಹುಲ್‌, “56 ಇಂಚಿನ ಈ ಜನರೇ ಈ ಹಿಂದೆ ಆಡಳಿತ ನಡೆಸುತ್ತಿದ್ದಾಗ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ಅವರು ಮಸೂದ್‌ ಅಜರ್‌ ಜೀ ಜೊತೆಗೆ ತೆರಳಿ, ಕಂದಹಾರ್‌ನಲ್ಲಿ ಹಸ್ತಾಂತರಿಸಿ ಬಂದಿದ್ದರು. ಇದೇ ಉಗ್ರ ಫೆ.14ರಂದು ಪುಲ್ವಾಮಾದಲ್ಲಿ 40ಕ್ಕೂ ಹೆಚ್ಚು ಯೋಧರ ಸಾವಿಗೆ ಕಾರಣನಾಗಿದ್ದ’ ಎಂದಿದ್ದಾರೆ. 

ಇದಕ್ಕೆ ಬಿಜೆಪಿ ಮುಖಂಡರು ತಿರುಗೇಟು ನೀಡಿದ್ದಾರೆ. ಈ ಹಿಂದೆ ದಿಗ್ವಿಜಯ್‌ ಸಿಂಗ್‌ರಂಥ ನಾಯಕರು ಒಸಾಮಾ ಜೀ ಹಾಗೂ ಹಫೀಜ್‌ ಸಯೀದ್‌ ಸಾಹಬ್‌ ಎಂದು ಕರೆದಿದ್ದರು. ಈಗ ನೀವು ಮಸೂದ್‌ ಅಜರ್‌ ಜೀ ಎಂದು ಕರೆದಿದ್ದೀರಿ. ಕಾಂಗ್ರೆಸ್‌ ಪಕ್ಷಕ್ಕೆ ಏನಾಗಿದೆ ಎಂದು ಸಚಿವ ರವಿಶಂಕರ ಪ್ರಸಾದ್‌ ಕೇಳಿದ್ದಾರೆ. ಆದರೆ ರಾಹುಲ್‌ ವ್ಯಂಗ್ಯವಾಗಿ ನೀಡಿರುವಂಥ ಈ ಹೇಳಿಕೆ ತಿರುಚಲಾಗಿದೆ ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೆವಾಲ ಹೇಳಿದ್ದಾರೆ. ಇನ್ನೊಂದೆಡೆ ಸಚಿವೆ ಸ್ಮತಿ ಇರಾನಿ ಕೂಡ ರಾಹುಲ್‌ ಹೇಳಿಕೆ ಟೀಕಿಸಿದ್ದಾರೆ. ರಾಹುಲ್‌ ಮತ್ತು ಪಾಕಿಸ್ಥಾನದ ಮಧ್ಯೆ ಯಾವ ಸಮಾನತೆ ಇದೆ? ಪಾಕಿಸ್ಥಾನ ಹಾಗೂ ರಾಹುಲ್‌, ಉಗ್ರರನ್ನು ಪ್ರೀತಿಸುತ್ತಾರೆ. ಮಸೂದ್‌ನನ್ನು ಯಾವ ರೀತಿ ರಾಹುಲ್‌ ಸಂಬೋಧಿಸಿದ್ದಾರೆ ಎಂಬುದನ್ನು ನೋಡಿ. 

ರಾಹುಲ್‌ಗೆ ಉಗ್ರರೆಂದರೆ ಪ್ರೀತಿ ಎಂದು ಟ್ವೀಟ್‌ ಮಾಡಿದ್ದಾರೆ.
ನೀವೇ ಆಯ್ಕೆ ಮಾಡಿ:  
ಇದೇ ವೇಳೆ, ಮಹಾತ್ಮ ಗಾಂಧಿಯ ಭಾರತ ಹಾಗೂ ನಾಥೂರಾಮ್‌ ಗೋಡ್ಸೆಯ ಭಾರತದ ಪೈಕಿ ಒಂದು ಭಾರತ ವನ್ನು ಆಯ್ದುಕೊಳ್ಳಿ. ಒಂದರಲ್ಲಿ ಪ್ರೀತಿಯಿದೆ ಹಾಗೂ ಇನ್ನೊಂದರಲ್ಲಿ ದ್ವೇಷವಿದೆ ಎಂದು ರಾಹುಲ್‌ ಗಾಂಧಿ ಪಕ್ಷದ ಬೂತ್‌ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಕೇಂದ್ರ ಸರಕಾರವು ರಫೇಲ್‌ ಡೀಲ್‌, ಡೋಕ್ಲಾಂ, ನಿರುದ್ಯೋಗ, ರಾಷ್ಟ್ರೀಯ ಭದ್ರತೆ ಸೇರಿ ಹಲವು ವಿಷಯಗಳಲ್ಲಿ ವಿಫ‌ಲವಾಗಿದೆ ಎಂದಿದ್ದಾರೆ.

ಇಂದು ಸಿಡಬ್ಲ್ಯೂಸಿ ಸಭೆ
ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್‌ನಿಂದಲೇ ಲೋಕಸಭೆ ಚುನಾವಣೆಗಾಗಿ ರಣತಂತ್ರ ಸಿದ್ಧಗೊಳಿಸಲು ಕಾಂಗ್ರೆಸ್‌ ಮುಂದಾಗಿದೆ. ಅದೇ ಉದ್ದೇಶಕ್ಕಾಗಿಯೇ ಮಂಗಳವಾರ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ)ಯ ವಿಶೇಷ ಸಭೆ ಅಹಮದಾಬಾದ್‌ನಲ್ಲಿ ನಡೆಸಲಾಗುತ್ತದೆ. 1961ರಲ್ಲಿ ಭಾವಾನಗರದಲ್ಲಿ ಸಿಡಬ್ಲ್ಯೂಸಿ ಸಭೆ ನಡೆದು 58 ವರ್ಷ ಕಳೆದ ಬಳಿಕ ಗುಜರಾತ್‌ನಲ್ಲಿ ಮತ್ತೂಮ್ಮೆ ಸಭೆ ನಡೆಯುತ್ತಿದೆ. ಚುನಾವಣೆಗೆ ಪೂರಕವಾಗಿ ಹಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಗಾಂಧಿನಗರ ಜಿಲ್ಲೆಯ ಅದಲಾಜ್‌ ಎಂಬಲ್ಲಿ ಸಭೆಯ ಬಳಿಕ ಸಾರ್ವಜನಿಕ ಸಭೆಯನ್ನೂ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಸಾರ್ವಜನಿಕ ಭಾಷಣ ಮಾಡುವ ಸಾಧ್ಯತೆ ಇದೆ. ಸಿಡಬ್ಲ್ಯೂಸಿ ಸಭೆಯಲ್ಲಿ ಈಡೇರಿಸಲಾಗದ ವಾಗ್ಧಾನಗಳ, ವೈಫ‌ಲ್ಯಗಳ ಬಗ್ಗೆ ಪ್ರಧಾನಿಯಿಂದ ಉತ್ತರ ಬಯಸುವ ಬಗ್ಗೆ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ.  ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ.ಮನೋಹನ್‌ ಸಿಂಗ್‌ ಸಹಿತ ಪ್ರಮುಖರು ಭಾಗವಹಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.