“Crony ಜೀವಿ ದೇಶವನ್ನು ಮಾರುತ್ತಿದ್ದಾರೆ” : ಮೋದಿ ವಿರುದ್ಧ ರಾಹುಲ್ ಟ್ವೀಟಾಸ್ತ್ರ
ರೈತರನ್ನು ಆಂದೋಲನ ಜೀವಿ ಎಂದು ಸಂಬೊಧಿಸಿದ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ರಾಹುಲ್ ಗಾಂಧಿ ತಿರುಗೇಟು
Team Udayavani, Feb 10, 2021, 6:54 PM IST
ನವ ದೆಹಲಿ : ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಆಂದೋಲನ ಜೀವಿ ಎಂದು ಸಂಬೊಧಿಸಿದ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.
ರಾಷ್ಟ್ರಪತಿಯವರ ಭಾಷಣಕ್ಕೆ ಉತ್ತರಿಸಿದ ಪ್ರಧಾನಿ, ರೈತರ ಪ್ರತಿಭಟನೆಯ ಜೊತೆಗೆ ಇದ್ದವರ ಬಗ್ಗೆ ರಾಷ್ಟ್ರ ಎಚ್ಚರದಿಂದಿರಬೇಕು. ಆಂದೋಲನ ಜೀವಿಗಳ ಹೊಸ ಬೆಳೆ ಇದು. ಅವರು ಪ್ರತಿಭಟನೆಗಾಗಿಯೇ ಬದುಕುತ್ತಾರೆ. ಅವರು ಯಾವಾಗಲೂ ಹೊಸ ಪ್ರತಿಭಟನೆ ಮಾಡಲು ಮಾರ್ಗವನ್ನು ಹುಡುಕುತ್ತಾರೆ ಎಂದು ರಾಜ್ಯಸಭೆಗೆ ಪ್ರದಾನಿ ಹೇಳಿದ್ದರು.
ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ವಿರೋಧಿಸುತ್ತಾ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲಿಸುತ್ತಾ ಬಂದಿದೆ.
ಮೋದಿ ಟೀಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಮ್ “ಆಂದೋಲನ ಜೀವಿ” ಎಂದು ಹೇಳಲು ಹೆಮ್ಮೆಯಾಗುತ್ತದೆ. ಮಹಾತ್ಮ ಸರ್ವ ಶ್ರೇಷ್ಠ ಆಂದೋಲನ ಜೀವಿಯಾಗಿದ್ದರು ಎಂದು ಮೋದಿಗೆ ತಿರುಗೇಟು ನೀಡಿದರು.
ಈ ಬೆಳವಣಿಗೆಯಾದ ಕೆಲ ಹೊತ್ತಲ್ಲೇ ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಮತ್ತೆ ಟ್ವೀಟ್ ಅಸ್ತ್ರವನ್ನು ಬಳಸಿದ್ದಾರೆ. “Crony ಜೀವಿ ದೇಶವನ್ನು ಮಾರುತ್ತಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.
Crony-जीवी है जो
देश बेच रहा है वो।#PSU_PSB_Sale— Rahul Gandhi (@RahulGandhi) February 10, 2021
ಇಷ್ಟೆಲ್ಲಾ ಬೆಳವಣಿಗೆಯ ನಡುವೆ ಸಾವಿರಾರು ರೈತ ಪ್ರತಿಭಟನಾಕಾರರು ದೆಹಲಿ ಹರಿಯಾಣ ಗಡಿ ಭಾಗಗಳಲ್ಲಿ ಕ್ಯಾಂಪಿಂಗ್ ಮಾಡುತ್ತಿದ್ದಾರೆ. ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ತನಕ ಮನೆಗೆ ತೆರಳುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ.
ಇತ್ತ, ಕೇಂದ್ರ ಸರ್ಕಾರ, ಕಾನೂನಿನ ಷರತ್ತುಗಳನ್ನು ಷರತ್ತುಗಳ ಮೂಲಕ ಚರ್ಚಿಸಲು ಪ್ರಸ್ತಾಪಿಸಿದೆ. ಒಂದುವರೆ ವರ್ಷ ಅವುಗಳ ಅನುಷ್ಟಾನವನ್ನೂ ಕೂಡ ನಿಲ್ಲಿಸಿದೆ. ಆದರೇ, ರೈತರು ಮೂರು ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯಲೇ ಬೇಕು ಎಂದು ಹಠ ಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ