ಸರ್ಕಾರದ ನಿರ್ಲಕ್ಷ್ಯದಿಂದ 40 ಲಕ್ಷ ಭಾರತೀಯರು ಕೋವಿಡ್ನಿಂದ ಸಾವನ್ನಪ್ಪಿದ್ದಾರೆ: ರಾಹುಲ್
Team Udayavani, Apr 17, 2022, 4:39 PM IST
ಹೊಸದಿಲ್ಲಿ: ಸರ್ಕಾರದ ನಿರ್ಲಕ್ಷ್ಯದಿಂದಾಗಿ 40 ಲಕ್ಷ ಭಾರತೀಯರು ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್, ಕೋವಿಡ್ ನಿಂದಾಗಿ ಸತ್ತವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಮತ್ತೊಮ್ಮೆ ಒತ್ತಾಯಿಸಿದ್ದಾರೆ.
ಟ್ವಿಟರ್ನಲ್ಲಿ ನ್ಯೂಯಾರ್ಕ್ ಟೈಮ್ಸ್ ವರದಿಯ ಸ್ಕ್ರೀನ್ಶಾಟೊಂದನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ. ಜಾಗತಿಕ ಕೋವಿಡ್ ಸಾವಿನ ಸಂಖ್ಯೆಯನ್ನು ಸಾರ್ವಜನಿಕಗೊಳಿಸಲು ವಿಶ್ವ ಆರೋಗ್ಯ ಸಂಸ್ಥೆಯ ಪ್ರಯತ್ನಗಳನ್ನು ಭಾರತ ತಡೆಯುತ್ತಿದೆ ಎಂದು ಈ ವರದಿ ಹೇಳಿಕೊಂಡಿದೆ.
“ಮೋದಿ ಜೀ ಸತ್ಯವನ್ನು ಮಾತನಾಡುವುದಿಲ್ಲ ಮತ್ತು ಇತರರನ್ನು ಮಾತನಾಡಲು ಬಿಡುವುದಿಲ್ಲ. ಆಮ್ಲಜನಕದ ಕೊರತೆಯಿಂದ ಯಾರೂ ಸತ್ತಿಲ್ಲ ಎಂದು ಅವರು ಇನ್ನೂ ಸುಳ್ಳು ಹೇಳುತ್ತಾರೆ!” ವರದಿಯ ಸ್ಕ್ರೀನ್ಶಾಟ್ನೊಂದಿಗೆ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಇದನ್ನೂ ಓದಿ:ಜಂತರ್ ಮಂತರ್ನಲ್ಲಿ ಉಕ್ರೇನ್ನಿಂದ ಹಿಂದಿರುಗಿದ ವಿದ್ಯಾರ್ಥಿಗಳ ಧರಣಿ
“ನಾನು ಮೊದಲೇ ಹೇಳಿದ್ದೆ, ಕೋವಿಡ್ ಸಮಯದಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ, ಐದು ಲಕ್ಷ ಅಲ್ಲ, 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ” ಎಂದು ರಾಹುಲ್ ಹೇಳಿದರು. ‘ಮೋದಿ ಜೀ, ನಿಮ್ಮ ಜವಾಬ್ದಾರಿಯನ್ನು ಪೂರೈಸಿ, ಪ್ರತಿ ಕೋವಿಡ್ ಸಂತ್ರಸ್ತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರವನ್ನು ನೀಡಿ’ ಎಂದು ಆಗ್ರಹಿಸಿದ್ದಾರೆ.
मोदी जी ना सच बोलते हैं, ना बोलने देते हैं।
वो तो अब भी झूठ बोलते हैं कि oxygen shortage से कोई नहीं मरा!
मैंने पहले भी कहा था – कोविड में सरकार की लापरवाहियों से 5 लाख नहीं, 40 लाख भारतीयों की मौत हुई।
फ़र्ज़ निभाईये, मोदी जी – हर पीड़ित परिवार को ₹4 लाख का मुआवज़ा दीजिए। pic.twitter.com/ZYKiSK2XMJ
— Rahul Gandhi (@RahulGandhi) April 17, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ