Delhi ಅಧಿಕೃತ ಬಂಗಲೆಯ ಕೀಲಿಕೈಗಳನ್ನು ಹಸ್ತಾಂತರಿಸಿದ ರಾಹುಲ್
ಹಿಂದೂಸ್ಥಾನದ ಜನರು ನನಗೆ 19 ವರ್ಷಗಳ ಕಾಲ ಈ ಮನೆಯನ್ನು ನೀಡಿದ್ದಾರೆ...
Team Udayavani, Apr 22, 2023, 10:13 PM IST
ಹೊಸದಿಲ್ಲಿ : ‘ಮೋದಿ ಉಪನಾಮ’ ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ 12 ತುಘಲಕ್ ಲೇನ್ ಬಂಗಲೆಯನ್ನು ಖಾಲಿ ಮಾಡಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಅಧಿಕೃತ ಬಂಗಲೆಯ ಕೀಗಳನ್ನು ಲೋಕಸಭೆಯ ಕಾರ್ಯದರ್ಶಿಗೆ ಗಾಂಧಿ ಹಸ್ತಾಂತರಿಸಿದ್ದಾರೆ. ಮಾಜಿ ಕಾಂಗ್ರೆಸ್ ಅಧ್ಯಕ್ಷರು ಶುಕ್ರವಾರವೇ ಅಧಿಕೃತ ನಿವಾಸದಿಂದ ತಮ್ಮ ಎಲ್ಲಾ ವಸ್ತುಗಳನ್ನು ಸ್ಥಳಾಂತರಿಸಿದ್ದರು.
#WATCH | Delhi: Congress leader Rahul Gandhi hands over his official bungalow, at Tughlak Lane, in the presence of Former Congress president Sonia Gandhi & party General Secretary Priyanka Gandhi Vadra and KC Venugopal. pic.twitter.com/FAPifisfPU
— ANI (@ANI) April 22, 2023
“ಮೋದಿ ಉಪನಾಮ” ಹೇಳಿಕೆಗಾಗಿ ಸೂರತ್ ನ್ಯಾಯಾಲಯವು ದೋಷಾರೋಪಣೆ ಮತ್ತು ಎರಡು ವರ್ಷಗಳ ಶಿಕ್ಷೆ ವಿಧಿಸಿ ಅನರ್ಹಗೊಳಿಸಿದ ನಂತರ ರಾಹುಲ್ ಅವರಿಗೆ ಎಪ್ರಿಲ್ 22 ರೊಳಗೆ ಅಧಿಕೃತ ಬಂಗಲೆಯನ್ನು ಖಾಲಿ ಮಾಡುವಂತೆ ಹೇಳಲಾಗಿತ್ತು.
“ಹಿಂದೂಸ್ಥಾನದ ಜನರು ನನಗೆ 19 ವರ್ಷಗಳ ಕಾಲ ಈ ಮನೆಯನ್ನು ನೀಡಿದ್ದಾರೆ, ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದು ಸತ್ಯವನ್ನು ಮಾತನಾಡಿದ್ದಕ್ಕಾಗಿ ಬೆಲೆಯಾಗಿದೆ. ಸತ್ಯವನ್ನು ಮಾತನಾಡಿದ್ದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧ…” ಎಂದು ರಾಹುಲ್ ಗಾಂಧಿ ಅವರು ಬಂಗಲೆ ಖಾಲಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೆಸಿ ವೇಣುಗೋಪಾಲ್ ಈ ವೇಳೆ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ