ರಾಹುಲ್ ಸಣ್ಣ ಹುಡುಗ, ಆತನ ಮಾತಿಗೆ ಪ್ರತಿಕ್ರಿಯೆ ನೀಡಲ್ಲ: ಮಮತಾ ಬ್ಯಾನರ್ಜಿ
Team Udayavani, Mar 28, 2019, 11:34 AM IST
ಕೋಲ್ಕತ : ಪಶ್ಚಿಮ ಬಂಗಾಲದಲ್ಲಿನ ಹಿಂಸೆಗೆ ತೃಣಮೂಲ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿರುವುದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಹುಲ್ “ಒಬ್ಬ ಸಣ್ಣ ಹುಡುಗ; ಆತನ ಮಾತಿಗೆ ಪ್ರತಿಕ್ರಿಯೆ ಅಗತ್ಯವಿಲ್ಲ” ಎಂದು ಲೇವಡಿ ಮಾಡಿದ್ದಾರೆ.
ರಾಹುಲ್ ಮತ್ತು ಮಮತಾ ಬಹಳ ಹಿಂದೆ ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದರಾದರೂ ಉಭಯ ನಾಯಕರ ನಡುವಿನ ಸರಸ-ವಿರಸ 2019ರ ಲೋಕಸಭಾ ಚುನಾವಣೆಯತ್ತ ಸಾಗುವಲ್ಲಿ ಕಡಿಮೆಯೇನೂ ಆಗಿಲ್ಲ.
ಈ ವರ್ಷ ಜನವರಿಯಲ್ಲಿ ಸಂಸದೆ ಮೌಸಮ್ ಬೇನಜೀರ್ ನೂರ್ ಅವರು ಕಾಂಗ್ರೆಸ್ ತೊರೆದು ಟಿಎಂಸಿ ಸೇರಿದ್ದರು. ರಾಹುಲ್ ಗೆ ಇದು ತೀರ ಅಪಥ್ಯವೆನಿಸಿ ಆಕೆ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಎಸಗಿದ್ದಾರೆ ಎಂದು ಆರೋಪಿಸಿದ್ದರು.
ಕಳೆದ ವಾರ ಚುನಾವಣಾ ರಾಲಿಯಲ್ಲಿ ರಾಹುಲ್ ಅವರು ಉತ್ತರ ಮಾಲ್ಡಾದ ದ್ರೋಹಿ, ಮಾಜಿ ಕಾಂಗ್ರೆಸ್ ಸಂಸದೆಯನ್ನು ಜನರು ಶಿಕ್ಷಿಸಬೇಕು ಎಂದು ಕರೆ ನೀಡಿದ್ದರಲ್ಲದೆ, ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯ ಹಾಗೆ ಎಲ್ಲರ ಮೇಲೂ ದಬ್ಟಾಳಿಕೆ ನಡೆಸುವ ಒಬ್ಬ ಸರ್ವಾಧಿಕಾರಿ; ಇವರಿಬ್ಬರೂ ತಮ್ಮ ಸರಕಾರ ನಡೆಸುವ ವಿಷಯದಲ್ಲಿ ಯಾರ ಜತೆಯೂ ಸಮಾಲೋಚಿಸುವುದಿಲ್ಲ, ಸಲಹೆ ಅಭಿಪ್ರಾಯಗಳನ್ನೂ ಕೇಳುವುದಿಲ್ಲ ಎಂದು ಟೀಕಿಸಿದ್ದರು.
ನಿನ್ನೆ ಬುಧವಾರ ಮಮತಾ ಬ್ಯಾನರ್ಜಿ ಅವರು ರಾಹುಲ್ ಟೀಕೆಗೆ ಚುಟುಕಿನ ಪ್ರತಿಕ್ರಿಯೆ ನೀಡುತ್ತಾ, ಆತನೊಬ್ಬ ಸಣ್ಣ ಹುಡುಗ; ಆತ ಏನೋ ಹೇಳಿದ್ದಾನೆ; ಅದಕ್ಕೆ ನಾನು ಪ್ರತಿಕ್ರಿಯೆ ನೀಡ ಬಯಸುವುದಿಲ್ಲ’ ಎಂದು ಕಟಕಿಯಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ