ರಾಹುಲ್‌-ಮೋದಿ ವಾಗ್ವಾದ


Team Udayavani, May 6, 2019, 6:25 AM IST

modi-rahul

ಹೊಸದಿಲ್ಲಿ: ದೇಶದಲ್ಲಿ ಐದನೇ ಹಂತದ ಮತದಾನಕ್ಕೆ ಅಖಾಡ ಅಣಿ ಗೊಳ್ಳುತ್ತಿರುವಂತೆಯೇ, ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನಡುವಿನ ವಾಕ್ಸಮರ ತೀವ್ರಗೊಂಡಿದೆ.

ಉತ್ತರಪ್ರದೇಶದ ರ್ಯಾಲಿಯೊಂದರಲ್ಲಿ ಶನಿ ವಾರ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆಯೊಂದು ಈಗ ವಿವಾದ ಸೃಷ್ಟಿಸಿದ್ದು, ಮೋದಿ ಹೇಳಿಕೆಗೆ ಕಾಂಗ್ರೆಸ್‌ನಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರು “ಭ್ರಷ್ಟಾಚಾರಿ ನಂ.1′ ಆಗಿಯೇ ಮೃತಪಟ್ಟರು ಎಂದು ಮೋದಿ ಭಾಷಣದಲ್ಲಿ ಹೇಳಿದ್ದರು. ಈ ಹೇಳಿಕೆಗೆ ಕಾಂಗ್ರೆಸ್‌ ಹಿರಿಯ ನಾಯಕರಾದ ಪಿ. ಚಿದಂಬರಂ, ಅಶೋಕ್‌ ಗೆಹೊÉàಟ್‌ ಮತ್ತಿತರರು ಆಕ್ರೋಶ ವ್ಯಕ್ತಪಡಿಸಿ ದರೆ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು, “ನಿಮ್ಮ ಹೇಳಿಕೆಗೆ ಪ್ರೀತಿ ಮತ್ತು ದೊಡ್ಡದಾದ ಆಲಿಂಗನವೇ ನನ್ನ ಉತ್ತರ’ ಎಂದು ಪ್ರತಿಕ್ರಿಯಿಸಿದ್ದಾರೆ.

ರಫೇಲ್‌ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಪ್ರತಾಪ್‌ಗ್ಢ ರ್ಯಾಲಿಯಲ್ಲಿ ವಾಗ್ಧಾಳಿ ನಡೆಸಿದ ಮೋದಿ, “ನಿಮ್ಮ ತಂದೆ ರಾಜೀವ್‌ ಗಾಂಧಿಗೆ ಅವರ ಹೊಗಳು
ಭಟರು ಮಿಸ್ಟರ್‌ ಕ್ಲೀನ್‌ (ಸ್ವತ್ಛ ವ್ಯಕ್ತಿತ್ವವುಳ್ಳ ವರು) ಎಂದು ಬಣ್ಣಿಸಿರಬಹುದು.

ಆದರೆ ರಾಜೀವ್‌ ಗಾಂಧಿ ಭ್ರಷ್ಟಾಚಾರಿ ನಂ.1 ಆಗಿಯೇ ಮೃತಪಟ್ಟರು’ ಎಂದಿದ್ದರು. 1980ರಲ್ಲಿ ರಾಜೀವ್‌ ಅವರ ಸರಕಾರಕ್ಕೆ ಕೊಡಲಿಯೇಟು ನೀಡಿದ ಬೊಫೋರ್ಸ್‌ ಹಗರಣವನ್ನು ಉಲ್ಲೇ ಖೀಸಿ ಮೋದಿ ಈ ಮಾತುಗಳನ್ನಾಡಿದ್ದರು.
ಸ್ವೀಡನ್‌ನ ರಕ್ಷಣಾ ಸಾಮಗ್ರಿ ತಯಾರಕ ಸಂಸ್ಥೆ ಬೊಫೋರ್ಸ್‌ ಮಾಜಿ ಪ್ರಧಾನಿ ರಾಜೀವ್‌ಗೆ ಕಿಕ್‌ಬ್ಯಾಕ್‌ ನೀಡಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಆದರೆ ರಾಜೀವ್‌ ಗಾಂಧಿ ಲಂಚ ಸ್ವೀಕರಿಸಿದ್ದಕ್ಕೆ ಯಾವುದೇ ಪುರಾವೆ ಇರದ ಕಾರಣ ಅವರಿಗೆ ಹೈಕೋರ್ಟ್‌ ಕ್ಲೀನ್‌ಚಿಟ್‌ ನೀಡಿತ್ತು.

ಪ್ರೀತಿ ಮತ್ತು ಅಪ್ಪುಗೆ ಮಾತ್ರ
ಪ್ರಧಾನಿ ಮೋದಿ ಹೇಳಿಕೆಗೆ ಸಂಬಂಧಿಸಿ ರವಿವಾರ ಪ್ರತಿಕ್ರಿಯಿಸಿರುವ ರಾಹುಲ್‌ ಗಾಂಧಿ, “ಮೋದಿಯವರೇ, ಹೋರಾಟ ಅಂತ್ಯವಾಗಿದೆ. ನಿಮ್ಮ ಕರ್ಮ ನಿಮಗಾಗಿ ಕಾಯುತ್ತಿದೆ. ನಿಮ್ಮ ಕುರಿತು ನಿಮ್ಮೊಳಗೇ ಇರುವಂಥ ನಂಬಿಕೆಯನ್ನು ನನ್ನ ತಂದೆಯ ಮೇಲೆ ಹೊರಿಸುವುದರಿಂದ ನೀವು ನಿಮ್ಮನ್ನು ರಕ್ಷಿಸಿಕೊಳ್ಳಲಾರಿರಿ. ನಿಮಗಿದೋ ಪ್ರೀತಿ ಮತ್ತು ಅಪ್ಪುಗೆಯನ್ನು ನೀಡಬಯಸುತ್ತೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಇದೇ ವೇಳೆ, ಪ್ರಿಯಾಂಕಾ ವಾದ್ರಾ ಅವರೂ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದು,
“ರಾಜೀವ್‌ಗಾಂಧಿ ಅವರು ಅಮೇಠಿಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟರು. ಅದೇ ಅಮೇಠಿಯ ಜನರು ನಿಮಗೆ ಉತ್ತರ ಕೊಡುತ್ತಾರೆ. ನಿಜ ಮೋದಿಜೀ, ವಿಶ್ವಾಸ ಘಾತಕರನ್ನು ಈ ದೇಶ ಎಂದಿಗೂ ಕ್ಷಮಿಸಲ್ಲ’ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ಗೆ ಮತ ನೀಡಿ: ಮಾಯಾ
ಕಾಂಗ್ರೆಸ್‌ ಅನ್ನು ದೂರವಿಟ್ಟು ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಎಸ್‌ಪಿ ನಾಯಕಿ ಮಾಯಾವತಿ ಅವರು ರವಿವಾರ, “ಉತ್ತರಪ್ರದೇಶದ ಅಮೇಠಿ ಮತ್ತು ರಾಯ್‌ಬರೇಲಿಯಲ್ಲಿ ಕಾಂಗ್ರೆಸ್‌ಗೆà ಮತ ನೀಡಿ’ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಸೋಮವಾರ 5ನೇ ಹಂತದಲ್ಲಿ ಈ ಎರಡೂ ಕ್ಷೇತ್ರಗಳಿಗೂ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮಾಯಾ ಅವರು ಪ್ರಕಟನೆ ಹೊರಡಿಸಿದ್ದು, ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಅಮೇಠಿ ಮತ್ತು ರಾಯ್‌ಬರೇಲಿಯಲ್ಲಿ ನಾವು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿದ್ದೇವೆ. ಎಲ್ಲರೂ ಕಾಂಗ್ರೆಸ್‌ಗೆ ಮತ ಚಲಾಯಿಸಿ ಎಂದು ಕರೆ ನೀಡಿದ್ದಾರೆ.

ಘಟಾನುಘಟಿಗಳ ಭವಿಷ್ಯ ಇಂದು ನಿರ್ಧಾರ
ಬಿಜೆಪಿ, ಕಾಂಗ್ರೆಸ್‌, ಎಸ್‌ಪಿ-ಬಿಎಸ್ಪಿ ಸಹಿತ ಪ್ರಮುಖ ರಾಜಕೀಯ ಪಕ್ಷಗಳಿಗೆ ಮಹತ್ವವೆನಿಸಿರುವ 5ನೇ ಹಂತದ ಮತದಾನ ಸೋಮವಾರ ನಡೆಯ ಲಿದೆ. 7 ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಈ ಪೈಕಿ ಉತ್ತರಪ್ರದೇಶದ 14, ಪಶ್ಚಿಮ ಬಂಗಾಲದ 7, ಬಿಹಾರದ 5 ಕ್ಷೇತ್ರಗಳೂ ಸೇರಿವೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌, ಸ್ಮತಿ ಇರಾನಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಎಸ್‌ಪಿ ನಾಯಕಿ ಪೂನಂ ಸಿನ್ಹಾ, ಕಾಂಗ್ರೆಸ್‌ ನಾಯಕ ಜಿತಿನ್‌ ಪ್ರಸಾದ್‌ ಮತ್ತಿತರ ಘಟಾನುಘಟಿಗಳ ಭವಿಷ್ಯವೂ ಈ ಹಂತದಲ್ಲೇ ನಿರ್ಧಾರವಾಗಲಿದೆ.

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಕುರಿತು ಪ್ರಧಾನಿ ಮೋದಿ ಆಡಿರುವ ಮಾತುಗಳು ಅವರ ಹತಾಶೆ ಮತ್ತು ಸೋಲುವ ಭೀತಿಯನ್ನು ತೋರಿ ಸಿವೆ. ಮೃತ ವ್ಯಕ್ತಿ ಬಗ್ಗೆ ಕೆಟ್ಟ ಮಾತುಗಳನ್ನು ಆಡುವುದನ್ನು ಯಾವುದಾದರೂ
ಧರ್ಮ ಒಪ್ಪುತ್ತದೆಯೇ?
– ಪಿ.ಚಿದಂಬರಂ, ಕಾಂಗ್ರೆಸ್‌ ನಾಯಕ

ರಾಜೀವ್‌ ಗಾಂಧಿ ಕುರಿತು ಪ್ರಧಾನಿ ಮೋದಿ ಆಡಿರುವ ಪ್ರತಿಯೊಂದು ಪದವೂ ಸತ್ಯ. 1984ರ ಗಲಭೆಯಲ್ಲಿ ಸಿಕ್ಖರ ಹತ್ಯೆ ಯಾದಾಗ ಅದನ್ನು ರಾಜೀವ್‌ಗಾಂಧಿ ಬೆಂಬಲಿಸಿರಲಿಲ್ಲವೇ? ದೇಶದ ಜನರಿಗೆ ಎಲ್ಲವೂ ಗೊತ್ತಿದೆ.
– ಪ್ರಕಾಶ್‌ ಜಾಬ್ಡೇಕರ್‌, ಕೇಂದ್ರ ಸಚಿವ

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.