ರಾಜೀನಾಮೆಗೆ ರಾಹುಲ್ ನಾಂದಿ!
ಕರ್ನಾಟಕದ ಬೆಳವಣಿಗೆಗೂ ಬಿಜೆಪಿಗೂ ಸಂಬಂಧವಿಲ್ಲ:ಲೋಕಸಭೆಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್
Team Udayavani, Jul 9, 2019, 6:00 AM IST
ಹೊಸದಿಲ್ಲಿ: ಕರ್ನಾಟಕದ ರಾಜಕೀಯ ಬಿಕ್ಕಟ್ಟು ಸೋಮವಾರ ಸಂಸತ್ನಲ್ಲೂ ಪ್ರತಿಧ್ವನಿಸಿದೆ. ಬಿಕ್ಕಟ್ಟಿಗೆ ಬಿಜೆಪಿ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದರೆ, ನಮಗೂ ಬಿಕ್ಕಟ್ಟಿಗೂ ಸಂಬಂಧವೇ ಇಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.
ಲೋಕಸಭೆಯಲ್ಲಿ ಈ ವಿಚಾರ ಪ್ರಸ್ತಾವಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ಪತನಗೊಳಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ರಹಸ್ಯ ಸಂಚು ರೂಪಿಸಿದೆ. ನಮ್ಮ ಶಾಸಕರನ್ನು ಮುಂಬಯಿಯ ಹೊಟೇಲ್ಗೆ ಕರೆದೊಯ್ಯಲಾಗಿದೆ. ಶಾಸಕರು ರಾಜ್ಯಪಾಲರನ್ನು ಭೇಟಿಯಾದ ಮರುಕ್ಷಣವೇ ಅವರಿಗೆ ವಾಹನ, ವಿಮಾನ, ಹೊಟೇಲ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆರೋಪಿಸಿದರು.
ರಾಜೀನಾಮೆಗೆ ನಾಂದಿ ಹಾಡಿದ್ದು ರಾಹುಲ್
ಚೌಧರಿ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕರ್ನಾಟಕದ ಬೆಳವಣಿಗೆಗಳಿಗೂ ಬಿಜೆಪಿಗೂ ಸಂಬಂಧವಿಲ್ಲ. ನಾವು ಯಾವುದೇ ಶಾಸಕ ಅಥವಾ ಸಂಸದನಿಗೆ ಪಕ್ಷಾಂತರ ಮಾಡುವಂತೆ ಒತ್ತಡ ಹಾಕಿಲ್ಲ. ನಮ್ಮ ಸರಕಾರವು ಸಂಸತ್ನ ಪಾವಿತ್ರ್ಯವನ್ನು ರಕ್ಷಿಸುವಲ್ಲಿ ಬದ್ಧವಾಗಿದೆ ಎಂದರು. ಅಲ್ಲದೆ, ರಾಜೀನಾಮೆ ಪರ್ವಕ್ಕೆ ನಾಂದಿ ಹಾಡಿದ್ದೇ ರಾಹುಲ್ ಗಾಂಧಿ ಎಂದು ಹೇಳುವ ಮೂಲಕ ಲೇವಡಿ ಮಾಡಿದರು. ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಪ್ರಜಾತಂತ್ರ ಉಳಿಸಿ ಎಂಬ ಫಲಕಗಳನ್ನು ಹಿಡಿದುಕೊಂಡು ಘೋಷಣೆ ಕೂಗತೊಡಗಿದರು.
ಕರ್ನಾಟಕದಲ್ಲಿ ಏನು ನಡೆಯುತ್ತಿದೆಯೋ ಅದಕ್ಕೆ ಅದೇ ಪಕ್ಷಗಳ ಕೆಲವು ನಾಯಕರಲ್ಲಿನ ಮಹತ್ವಾಕಾಂಕ್ಷೆಗಳೇ ಕಾರಣ ಎಂಬುದು ಎಲ್ಲರಿಗೂ ಗೊತ್ತು. ನಾವು ಏನನ್ನೂ ಮಾಡುತ್ತಿಲ್ಲ. ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ ಅಷ್ಟೆ.
– ರಾಮ್ಮಾಧವ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್