ರಾಹುಲ್ ರಾವಣ, ಪ್ರಿಯಾಂಕಾ ಶೂರ್ಪನಖೀ ಎಂದ ಯುಪಿ ಬಿಜೆಪಿ ಶಾಸಕ
Team Udayavani, Jan 30, 2019, 5:04 AM IST
ಹೊಸದಿಲ್ಲಿ : ವಿವಾದಿತ ಹೇಳಿಕೆಗಳಿಗೆ ಕುಪ್ರಸಿದ್ಧರಾಗಿರುವ ಬಜೆಪಿ ಶಾಸಕ ಸುರೇಂದ್ರ ಸಿಂಗ್, ರಾಹುಲ್ ಗಾಂಧಿ ರಾವಣನೆಂದೂ, ಆತನ ಸಹೋದರಿ ಪ್ರಿಯಾಂಕಾ ಗಾಂಧಿ ಶೂರ್ಪನಖೀ ಎಂದೂ ಲೇವಡಿ ಮಾಡಿದ್ದಾರೆ.
ಉತ್ತರ ಪ್ರದೇಶದ ಬಲ್ಲಿಯಾ ಕ್ಷೇತ್ರದ ಶಾಸಕರಾಗಿರುವ ಸುರೇಂದ್ರ ಸಿಂಗ್, ‘ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು; ಈಚೆಗೆ ರಾಜಸ್ಥಾನ ಮತ್ತು ಮಧ್ಯ ಪ್ರದೇಶದಲ್ಲಿ ಬಿಜೆಪಿ ಸೋಲಲು ಎಸ್ಸಿ/ಎಸ್ಟಿ ಕಾಯಿದೆ ಕಾರಣ’ ಎಂದು ಹೇಳಿದ್ದಾರೆ.
‘ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ರಾಜಕೀಯ ಘನತೆ ಇಲ್ಲ; ಅದು ದೇಶದಲ್ಲಿ ಬೇರೆಲ್ಲೂ ಇನ್ನು ವಿಜಯ ಗಳಿಸದು’ ಎಂದು ಸಿಂಗ್ ಹೇಳಿದರು.
‘ರಾಮನ ವಿರುದ್ಧ ರಾವಣನು ಯುದ್ಧ ಹೂಡುವ ಮೊದಲು ತನ್ನ ತಂಗಿ ಶೂರ್ಪನಖೀಯನ್ನು ಕಳುಹಿಸಿದ; ಅದೇ ರೀತಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಎಂಬ ರಾವಣನು, ರಾಮನೆಂಬ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೋರಾಡುವ ಮುನ್ನ ಶೂರ್ಪನಖೀ ಎಂಬ ತನ್ನ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ಕಳುಹಿಸಿದ್ದಾನೆ’ ಎಂದು ಸುರೇಂದ್ರ ಸಿಂಗ್ ಹೇಳಿರುವ ಮಾತುಗಳು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಇದೇ ಶಾಸಕ ಸುರೇಂದ್ರ ಸಿಂಗ್ ಈಚೆಗೆ ತನ್ನ ಸಹೋದ್ಯೋಗಿ, ಶಾಸಕಿ ಸಾಧನಾ ಸಿಂಗ್, ಬಿಎಸ್ಪಿ ಅಧಿನಾಯಕಿ ಮಾಯಾವತಿ ಲಿಂಗಾಂತರಿಗಿಂತಲೂ ಕೆಟ್ಟವಳು’ ಎಂದು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಬೆಂಬಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ