ರಾಹುಲ್ ನಮಾಜಿಗೆ ಕುಳಿತವರಂತೆ ದೇವಳದಲ್ಲಿ ಕೂರುತ್ತಾರೆ: ಯೋಗಿ
Team Udayavani, Nov 22, 2017, 11:24 AM IST
ಲಕ್ನೋ : ‘ಚುನಾವಣೆಗೆ ಪೂರ್ವಭಾವಿ ಸಿದ್ಧತೆ ಎಂಬಂತೆ ದೇವಸ್ಥಾನದಿಂದ ದೇವಸ್ಥಾನಕ್ಕೆ ಹೋಗುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ “ದೇವಸ್ಥಾನದಲ್ಲಿ ಹೇಗೆ ಕುಳಿತುಕೊಳ್ಳಬೇಕು ಎಂಬುದೇ ಗೊತ್ತಿಲ್ಲ; ಆತ ಮಸೀದಿಯಲ್ಲಿ ನಮಾಜ ಮಾಡುವ ರೀತಿಯಲ್ಲಿ ದೇವಸ್ಥಾನದಲ್ಲಿ ಕುಳಿತುಕೊಳ್ಳುತ್ತಾರೆ’ ಎಂದು ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ.
“ರಾಹುಲ್ ಗಾಂಧಿ ಅವರು ಈಚೆಗೆ ವಾರಾಣಸಿಯ ಕಾಶೀ ವಿಶ್ವನಾಥ ದೇವಸ್ಥಾನಕ್ಕೆ ಹೋಗಿದ್ದಾಗ ಅಲ್ಲಿ ಅವರು ಕುಳಿತ ಭಂಗಿ ಮಸೀದಿಯಲ್ಲಿ ನಮಾಜು ಮಾಡುವ ರೀತಿಯಲ್ಲಿತ್ತು; ಇದನ್ನು ಕಂಡ ಅಲ್ಲಿನ ಅರ್ಚಕರು, “ದೇವಸ್ಥಾನದಲ್ಲಿ ನೀವು ಹೀಗೆ ಕೂರುವಂತಿಲ್ಲ; ಪಾಲ್ಟಿ ಹಾಕಿ (ಚಕ್ಕಳಮಕ್ಕಳ) ಕೂರಬೇಕು’ ಎಂದು ರಾಹುಲ್ ಗಾಂಧಿಗೆ ಹೇಳಿದರು’ಎಂಬುದಾಗಿ ಸಿಎಂ ಆದಿತ್ಯನಾಥ್ ಹೇಳಿದರು.
ಅದೇನಿದ್ದರೂ ಚುನಾವಣೆಗಾಗಿ ದೇವಸ್ಥಾನದಿಂದ ದೇವಸ್ಥಾನಕ್ಕೆ ಓಡುತ್ತಿರುವ ರಾಹುಲ್ ಗಾಂಧಿ ಅವರ ಮನಸ್ಸು ಈ ಕಾರಣದಿಂದಾದರೂ ಪರಿಶುದ್ಧವಾಗಲೆಂದು ಹಾರೈಸುತ್ತೇನೆ ಎಂದು ಯೋಗಿ ತಿಳಿಸಿದರು.
ರಾಹುಲ್ ಗಾಂಧಿ ಕೇವಲ ಮತಗಳಿಗಾಗಿ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆಯಾದರೆ, ಕಾಂಗ್ರೆಸ್ ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡು “ದೇವರನ್ನು ಧ್ಯಾನಿಸುವ ವಿಧಾನಕ್ಕೆ ಯಾರಲ್ಲಾರದರೂ ಪೇಟೆಂಟ್ ಇದೆಯೇ?’ ಎಂದು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ