ರಾಹುಲ್ಗೂ ವಯನಾಡ್ಗೂ ಇರುವ ಭಾವನಾತ್ಮಕ ಸಂಬಂಧ ಏನೆಂದು ಗೊತ್ತಾ ?
Team Udayavani, Apr 4, 2019, 6:02 PM IST
ವಯನಾಡ್ : ತನ್ನ ಕುಟುಂಬದ ರಾಜಕೀಯ ಭದ್ರಕೋಟೆಯಾಗಿರುವ ಅಮೇಠಿಯಿಂದ ಸ್ಪರ್ಧಿಸುವುದರ ಜತೆಗೆ ಕೇರಳದ ವಯನಾಡ್ ಕ್ಷೇತ್ರದಿಂದಲೂ ಈ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ವಯನಾಡ್ ಕ್ಷೇತ್ರಕ್ಕೂ ಯಾರಿಗೂ ಗೊತ್ತಿಲ್ಲದ ಒಂದು ವಿಶೇಷ ಭಾವನಾತ್ಮಕ ಸಂಬಂಧ ಇದೆ ಎಂದು ಪಕ್ಷದ ನಾಯಕರು ಇಂದಿಲ್ಲಿ ಹೇಳಿದರು.
ರಾಹುಲ್ ಗಾಂಧಿ ಅವರ ತಂದೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಚಿತಾಭಸ್ಮವನ್ನು 1991ರಲ್ಲಿ ಇಲ್ಲಿಗೆ ತಂದು ಇಲ್ಲಿನ ತಿರುನೆಲ್ಲಿ ಗ್ರಾಮದಲ್ಲಿರುವ ಸುಪ್ರಸಿದ್ಧ ಮಹಾ ವಿಷ್ಣು ದೇಗುಲದ ತೊರೆಗೆ ಸೇರುವ ಪಾಪನಾಶಿನಿಯಲ್ಲಿ ಮುಳುಗಿಸಲಾಗಿತ್ತು.
ಈ ವಿಷಯವನ್ನು ಇಂದಿಲ್ಲಿ ಕೇರಳ ವಿಧಾನಸಭೆಯಲ್ಲಿನ ವಿರೋಧ ಪಕ್ಷ ನಾಯಕ ರಮೇಶ್ ಚೆನ್ನಿತ್ತಲ ಅವರು ನೆನಪಿಸಿಕೊಂಡರು.
“ಆ ಸಂದರ್ಭದಲ್ಲಿ ಕೆ ಕರುಣಾಕರನ್ ಅವರು ಕೇರಳದ ಮುಖ್ಯಮಂತ್ರಿಯಾಗಿದ್ದಾರೆ. ರಾಜೀವ್ ಗಾಂಧಿ ಅವರ ಚಿತಾಭಸ್ಮವನ್ನು ಪಾಪನಾಶಿನಿಯಲ್ಲಿ ವಿಧ್ಯುಕ್ತವಾಗಿ ಮುಳುಗಿಸುವ ಸಂದರ್ಭದಲ್ಲಿ ಕರುಣಾಕರನ್, ನಾನು, ಮುಲ್ಲಪಳ್ಳಿ ರಾಮಚಂದ್ರನ್ ಮತು ಕೆ ಸಿ ವೇಣುಗೋಪಾಲ್ ಉಪಸ್ಥಿತರಿದ್ದೆವು’ ಎಂದು ಚೆನ್ನಿತ್ತಲ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
ರಾಜೀವ್ ಗಾಂಧಿ ಅವರು 1991ರ ಮೇ 21ರಂದು ತಮಿಳು ನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ಪ್ರಚಾರಾಭಿಯಾನದ ವೇಳೆ, ಆತ್ಮಾಹುತಿ ಬಾಂಬ್ ದಾಳಿಗೆ ಬಲಿಯಾಗಿದ್ದರು.
ವಯನಾಡ್ ನ ಪಾಪನಾಶಿನಲ್ಲಿ ಮೃತ ವ್ಯಕ್ತಿಯ ಚಿತಾಭಸ್ಮವನ್ನು ಮುಳುಗಿಸುವುದು ಬಿಹಾರದ ಗಯಾ ಪುಣ್ಯಕ್ಷೇತ್ರದಲ್ಲಿ ಕೈಗೊಳ್ಳುವ ವಿಧಿಗೆ ಸಮಾನವೆಂದು ತಿಳಿಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ