ರೈತರಿಂದ ರೈಲು ತಡೆ, ಪ್ರತಿಭಟನೆ; ಉತ್ತರಪ್ರದೇಶದ ಹಲವೆಡೆ ರೈಲು ಸಂಚಾರ ವ್ಯತ್ಯಯ
ಬೆಳಗ್ಗೆ 10ಗಂಟೆಯಿಂದ ಸಂಜೆ 6ಗಂಟೆವರೆಗೆ ರೈಲ್ ರೋಖೋ ನಡೆಯಲಿದೆ
Team Udayavani, Oct 18, 2021, 1:23 PM IST
ನವದೆಹಲಿ: ಉತ್ತರಪ್ರದೇಶದ ಲಖೀಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಹುದ್ದೆಯಿಂದ ವಜಾ ಮಾಡಿ, ಬಂಧಿಸುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ(ಅಕ್ಟೋಬರ್ 18) ಕರೆ ನೀಡಿರುವ ಆರು ಗಂಟೆಗಳ ರೈಲ್ ರೋಖೋ ಪರಿಣಾಮ ಹಲವೆಡೆ ರೈಲು ಸಂಚಾರ ವ್ಯತ್ಯಯ ಉಂಟಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಗಂಗಾವತಿ: ಸಾಣಾಪುರ್ ಲೇಕ್; ಜಂಪಿಂಗ್ ಮಾಡಲು ಹೋಗಿ ಇಬ್ಬರು ಐಟಿ ಉದ್ಯೋಗಿಗಳು ನೀರು ಪಾಲು
ರೈಲ್ವೆ ಅಧಿಕಾರಿಗಳ ಮಾಹಿತಿ ಪ್ರಕಾರ, ರೈತರ ರೈಲ್ ರೋಖೊ ಪ್ರತಿಭಟನೆಯಿಂದ ಫಿರೋಜ್ ಪುರ್, ಫಾಝಿಲ್ಕಾ, ಫಿರೋಜ್ ಪುರ್ ಲೂಧಿಯಾನ ಮಾರ್ಗಗಳಲ್ಲಿ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿರುವುದಾಗಿ ವರದಿ ವಿವರಿಸಿದೆ.
ವರದಿಯ ಪ್ರಕಾರ, ಉತ್ತರಪ್ರದೇಶದ ಬಹ್ರೈಚ್, ಮೈಲಾನಿ, ಬಹ್ರೈಚ್ ನನ್ಪಾರಾ, ಗೋರಖ್ ಪುರ್ ಮೈಲಾನಿ ಮತ್ತು ಲಕ್ನೋ-ಮೈಲಾನಿ ಮಾರ್ಗಗಳಲ್ಲಿಯೂ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿ ಹೇಳಿದೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 6ಗಂಟೆವರೆಗೆ ರೈಲ್ ರೋಖೋ ನಡೆಯಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್