ಸರಣಿ ರೈಲು ಅಪಘಾತ; ನೊಂದು ರಾಜೀನಾಮೆಗೆ ಮುಂದಾದ ಸಚಿವ ಪ್ರಭು!
Team Udayavani, Aug 23, 2017, 4:30 PM IST
ನವದೆಹಲಿ: ದೇಶದಲ್ಲಿನ ಸರಣಿ ರೈಲು ಅಪಘಾತಗಳಿಂದ ಮನನೊಂದ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದು, ಅದಕ್ಕೆ ಪ್ರಧಾನಿಯವರು ಕೆಲವು ದಿನ ಕಾಯುವಂತೆ ತಿಳಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ರೈಲ್ವೆ ಅಪಘಾತದ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸಚಿವ ಪ್ರಭು ಅವರು, ಈ ಆಕಸ್ಮಿಕ ರೈಲು ಅಪಘಾತಗಳಿಂದ ಜನರ ಸಾವು, ನೋವಿನಿಂದಾಗಿ ನಾನು ತುಂಬಾ ನೋವಿಗೊಳಗಾಗಿದ್ದೆ. ಇದಕ್ಕೆ ಕಾರಣ ನಾನು ಎಂಬ ಪಾಪಪ್ರಜ್ಞೆ ನನ್ನ ಕಾಡುತ್ತಿತ್ತು.
ಈ ಹಿನ್ನೆಲೆಯಲ್ಲಿ ನಾನು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ತಿಳಿಸಿದೆ. ಆದರೆ ಪ್ರಧಾನಿಯವರು ಸ್ವಲ್ಪ ಕಾಲ ಕಾಯುವಂತೆ ಹೇಳಿರುವುದಾಗಿ ಟ್ವೀಟ್ ನಲ್ಲಿ ಬಹಿರಂಗಪಡಿಸಿದ್ದಾರೆ.
ಕೇವಲ 5 ದಿನದೊಳಗೆ ಉತ್ತರಪ್ರದೇಶದಲ್ಲಿ ನಡೆದ 2 ರೈಲು ಹಳಿತಪ್ಪಿದ ಪ್ರಕರಣದ ನಂತರ ಸುರೇಶ್ ಪ್ರಭು ಅವರು ಈ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
MUST WATCH
ಹೊಸ ಸೇರ್ಪಡೆ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ