ವಾಯು ಚಂಡಮಾರುತ ಭೀತಿ; ಗುಜರಾತ್ ನಲ್ಲಿ 110 ರೈಲು ಸಂಚಾರ ರದ್ದು, ತೀವ್ರ ಕಟ್ಟೆಚ್ಚರ
Team Udayavani, Jun 13, 2019, 3:03 PM IST
ಅಹಮ್ಮದಾಬಾದ್:ಪ್ರಬಲ ಶಕ್ತಿಯೊಂದಿಗೆ ಗುಜರಾತ್ ಕರಾವಳಿಗೆ ವಾಯು ಚಂಡಮಾರುತ ಅಪ್ಪಳಿಸಲಿದೆ ಎಂಬ ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪ್ರಯಾಣಿಕರ ರಕ್ಷಣೆ ಮತ್ತು ಸುರಕ್ಷತೆಯ ನಿಟ್ಟಿನಲ್ಲಿ ಗುಜರಾತ್ ರೈಲ್ವೆ ಇಲಾಖೆ ಈಗಾಗಲೇ 110ಕ್ಕೂ ಅಧಿಕ ರೈಲುಗಳ ಸಂಚಾರವನ್ನು ರದ್ದುಪಡಿಸಿದೆ ಎಂದು ವರದಿ ತಿಳಿಸಿದೆ.
ಗುಜರಾತ್ ರೈಲ್ವೆ ಇಲಾಖೆ ಇಂದು ಬೆಳಗ್ಗೆ 70 ಹಾಗೂ ಮಧ್ಯಾಹ್ನ 28 ರೈಲುಗಳ ಸಂಚಾರವನ್ನು ರದ್ದುಪಡಿಸಿರುವುದಾಗಿ ತಿಳಿಸಿದೆ. ಮುಂಜಾಗ್ರತಾ ಕ್ರಮವಾಗಿ ಗುಜರಾತ್ ನ ವೆರಾವಾಲ್, ಓಖಾ, ಫೋರಬಂದರ್, ಭಾವ್ ನಗರ್, ಭುಜ್ ಮತ್ತು ಗಾಂಧಿಧಾಮ್ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಹೇಳಿದೆ.
ಗುಜರಾತ್ ಸಹಿತ ದೇಶದ ಪಶ್ಚಿಮ ಕರಾವಳಿಯ ಉದ್ದಕ್ಕೂ ಭಾರೀ ಮಳೆ, ಮತ್ತು ಗಂಟೆಗೆ 155 ರಿಂದ 165 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಕಟ್ಟೆಚ್ಚರ ವಹಿಸಲಾಗಿದೆ.
ರಕ್ಷಣಾ ತಂಡಗಳನ್ನು ಜಾಗೃತ ಸ್ಥಿತಿಯಲ್ಲಿ ಇರಿಸಲಾಗಿದೆ. ಹೆಲ್ಪ್ ಲೈನ್ಗಳನ್ನು ಸಜ್ಜುಗೊಳಿಸಲಾಗಿದೆ. ಭಾರತೀಯ ಕರಾವಳಿ ಕಾವಲು ಪಡೆ, ನೌಕಾ ಪಡೆ, ಭೂ ಸೇನೆ ಮತ್ತು ವಾಯು ಪಡೆಯನ್ನು ಕೂಡ ಯಾವುದೇ ಕ್ಷಣದಲ್ಲಿ ರಕ್ಷಣಾ ಕಾರ್ಯಕ್ಕೆ ನೆರವಾಗುವುದಕ್ಕಾಗಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ವಾಯು ಚಂಡಮಾರುತ ತನ್ನ ಪಥವನ್ನು ಬದಲಿಸಿರುವ ಹೊರತಾಗಿಯೂ ಸೌರಾಷ್ಟ್ರ ಕರಾವಳಿಯಾಗಿ ಸಾಗುತ್ತಿರುವುದರಿಂದ ಅಮ್ರೇಲಿ, ಗಿರ್, ಸೋಮನಾಥ್, ದೀವ್, ಜುನಾಗಢ, ದೇವಭೂಮಿ, ದ್ವಾರಕಾ ಮತ್ತು ಕಚ್ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುತ್ತಿದ್ದು ಇವು ತೀವ್ರವಾಗಿ ಬಾಧಿತವಾಗಿವೆ.
ನಿನ್ನೆ ಬುಧವಾರ ಗುಜರಾತ್ ಮತ್ತು ದೀವ್ ನ ತಗ್ಗು ಪ್ರದೇಶಗಳ ಸುಮಾರು 3.1 ಲಕ್ಷ ಮಂದಿಯನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ