ತೆಲಂಗಾಣದಲ್ಲಿ ಭಾರಿ ಮಳೆ; ಅವಘಡಗಳಲ್ಲಿ 5 ಕ್ಕೂ ಹೆಚ್ಚು ಬಲಿ
Team Udayavani, Jul 23, 2022, 1:38 PM IST
ಹೈದರಾಬಾದ್: ತೆಲಂಗಾಣದಲ್ಲಿ ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ವಾರಂಗಲ್ ಪೊಲೀಸ್ ಕಮಿಷನರ್ ತರುಣ್ ಜೋಶಿ ಅವರ ಪ್ರಕಾರ, ಶುಕ್ರವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಳೆಯ ಕಟ್ಟಡವೊಂದು ಕುಸಿದು ಪಕ್ಕದ ಗುಡಿಸಲಿನ ಮೇಲೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ.
ಇದು ಹಳೆಯ ಕಟ್ಟಡ . ನಿನ್ನೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಟ್ಟಡವು ಕುಸಿದಿದ್ದು, ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೇದಕ್ ಜಿಲ್ಲೆಯ ಚೇಗುಂಟಾದಲ್ಲಿ ಶನಿವಾರ ನಸುಕಿನ ವೇಳೆ ಮಳೆಯಿಂದಾಗಿ ಕಾರ್ಖಾನೆಯ ಕಾಂಪೌಂಡ್ ಗೋಡೆ ಕುಸಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮೇದಕ್ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಗೋಡೆ ಕುಸಿತದಿಂದ ಇಬ್ಬರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನರಸಿಂಗಿ-ವಲ್ಲಭಾಪುರ ಜಂಕ್ಷನ್ನಲ್ಲಿ ಇಂದು ಬೆಳಗ್ಗೆ ನೀರು ನಿಂತಿದ್ದರಿಂದ ಬೈಕ್ ಸ್ಕಿಡ್ ಆಗಿ ರಸ್ತೆ ವಿಭಜಕಕ್ಕೆ ತಲೆ ಢಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹೈದರಾಬಾದ್ ಮತ್ತು ತೆಲಂಗಾಣದ ಇತರ ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆ ಸುರಿದಿದ್ದು, ನಗರ ಮತ್ತು ರಾಜ್ಯದ ಇತರೆಡೆಗಳಲ್ಲಿ ಹಲವಾರು ಸ್ಥಳಗಳು ಜಲಾವೃತವಾಗಿದೆ. ಹವಾಮಾನ ವರದಿಯ ಪ್ರಕಾರ, ಇಂದು ವಿಕಾರಾಬಾದ್, ಮುಲುಗು, ಪೆದ್ದಪಲ್ಲಿ, ಕರೀಂನಗರ, ಜಯಶಂಕರ್ ಬೂಪಲ್ಲಪಲ್ಲಿ, ಕಾಮರೆಡ್ಡಿ, ಮೇದಕ್, ಸಂಗಾರೆಡ್ಡಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?