25 ವಿಭಾಗಗಳಲ್ಲಿ ಮಳೆ ಕೊರತೆ
Team Udayavani, Jun 24, 2019, 5:16 AM IST
ಹೊಸದಿಲ್ಲಿ: ಕೇರಳ ಕರಾವಳಿಗೆ ಮಾನ್ಸೂನ್ ಅಪ್ಪಳಿಸಿ ಎರಡು ವಾರಗಳೇ ಕಳೆದರೂ ದೇಶದಲ್ಲಿ ಮಳೆ ಸಾಕಷ್ಟು ಪ್ರಮಾಣದಲ್ಲಿ ಆಗಿಲ್ಲ. ಹವಾಮಾನ ಇಲಾಖೆಯ ಶೇ. 84ರಷ್ಟು ಉಪವಿಭಾಗಗಳಲ್ಲಿ ಮಳೆ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆ ದಾಖಲಾಗಿದೆ.
ಹವಾಮಾನ ಇಲಾಖೆಯು ದೇಶಾದ್ಯಂತ 36 ಉಪವಿಭಾಗಗಳನ್ನು ಹೊಂದಿದೆ. ಈ ಪೈಕಿ 25ರಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆ ಇದೆ. ಅದರಲ್ಲೂ ಆರು ಉಪವಿಭಾಗಗಳಲ್ಲಿ ಭಾರೀ ಮಳೆ ಕೊರತೆ ದಾಖಲಾಗಿದೆ. ಒಡಿಶಾ, ಲಕ್ಷದ್ವೀಪದಲ್ಲಿ ಸಾಮಾನ್ಯ, ಜಮ್ಮು ಕಾಶ್ಮೀರ, ಉತ್ತರ ರಾಜಸ್ಥಾನದಲ್ಲಿ ಹೆಚ್ಚುವರಿ ಮಳೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವಿಪರೀತ ಹೆಚ್ಚಿನ ಮಳೆಯಾಗಿದೆ. ಆದರೆ ಮಹಾರಾಷ್ಟ್ರದ ವಿದರ್ಭ, ಮರಾಠವಾಡ ಮತ್ತು ಕೇಂದ್ರ ಮಹಾರಾಷ್ಟ್ರ, ಪೂರ್ವ ಮಧ್ಯಪ್ರದೇಶ ಭಾಗದಲ್ಲಿ ತೀರಾ ಕಡಿಮೆ ಮಳೆಯಾಗಿದೆ.
ಪೆಂಡಾಲ್ ಬಿದ್ದು 14 ಸಾವು
ರಾಜಸ್ಥಾನ ಮತ್ತು ಬಿಹಾರದಲ್ಲಿ ಮಳೆ ಸಂಬಂಧಿ ದುರಂತದಲ್ಲಿ 24 ಮಂದಿ ಅಸುನೀಗಿ, ಮಧ್ಯ ಪ್ರದೇಶದಲ್ಲಿ ಇಬ್ಬರು ಬಲಿಯಾಗಿದ್ದಾರೆ. 50 ಮಂದಿ ಗಾಯಗೊಂಡಿದ್ದಾರೆ. ರಾಜಸ್ಥಾನದ ಬಾರ್ಮರ್ ಜಸೋಲ್ನಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಪೆಂಡಾಲ್ ಹಾಕಲಾಗಿತ್ತು. ಆಗ ಜೋರಾಗಿ ಗಾಳಿ ಬೀಸಿ, ಕುಳಿತಿದ್ದವರ ಮೇಲೆಯೇ ಪೆಂಡಾಲ್ ಕುಸಿದಿದ್ದರಿಂದ 14 ಮಂದಿ ಅಸುನೀಗಿ, 50 ಮಂದಿ ಗಾಯಗೊಂಡಿದ್ದಾರೆ. ಬಿಹಾರದ ಬಕ್ಸಾರ್, ಬೆಗುಸರೈನಲ್ಲಿ ಮಳೆಗೆ 10 ಮಂದಿ ಸಾವ ನ್ನಪ್ಪಿದ್ದಾ ರೆ. ಅಸುನೀಗಿದವರಿಗೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ