ಕೇರಳದಲ್ಲಿ ಮಳೆ: 2 ದಿನದಲ್ಲಿ 13 ಸಾವು
Team Udayavani, Jun 11, 2018, 5:03 PM IST
ತಿರುವನಂತಪುರ: ಮುಂಗಾರು ಪ್ರವೇಶವಾದಂದಿನಿಂದ ಕೇರಳದಲ್ಲಿ ನಿರಂತರ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಘಟನೆಗಳಿಂದ ಕಳೆದ 2 ದಿನಗಳಲ್ಲಿ 13 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ನದಿಗಳಲ್ಲಿ ಮುಳುಗಿ ಹಾಗೂ ಮರ ಬಿದ್ದು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಧಾರಾಕಾರ ಮಳೆಯಿಂದಾಗಿ ರಾಜ್ಯದ ಇಡುಕ್ಕಿ, ಕಲ್ಲಿಕೋಟೆ, ಕಣ್ಣೂರು ಮತ್ತಿತರ ಪ್ರದೇಶಗಳಲ್ಲಿ ಬೆಳೆ ಹಾನಿಯೂ ಸಂಭವಿಸಿದೆ. ಸಮುದ್ರದ ಅಬ್ಬರವೂ ಜೋರಾಗಿದ್ದು, ತೀರಪ್ರದೇಶದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ತಮಿಳುನಾಡಲ್ಲಿ ಪ್ರವಾಹ ಭೀತಿ: ಇನ್ನು ತಮಿಳುನಾಡಿನ ಪಿಲ್ಲೂರು ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ಬಿಡುತ್ತಿರುವ ಕಾರಣ, ಇಲ್ಲಿನ ಭವಾನಿ ನದಿಯಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ಜಿಲ್ಲಾಡಳಿತ ಹೇಳಿದೆ. ಹೀಗಾಗಿ, ನದಿ ತೀರದ ಗ್ರಾಮಸ್ಥರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ನೈಋತ್ಯ ಮುಂಗಾರು ಪ್ರವೇಶಿಸಿದ ಬಳಿಕ, ಕೊಯಮತ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಇಂದು ಭಾರೀ ಮಳೆ: ಏತನ್ಮಧ್ಯೆ, ಧೂಳು ಬಿರುಗಾಳಿ, ಮಳೆ, ಸಿಡಿಲಿನ ಅಬ್ಬರಕ್ಕೆ ಕಂಗೆಟ್ಟಿರುವ ಉತ್ತರಪ್ರದೇಶದಲ್ಲಿ ಸೋಮವಾರ ಭಾರೀ ಮಳೆ ಹಾಗೂ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನು, ಮುಂಬಯಿಯಲ್ಲೂ ರವಿವಾರ ಉತ್ತಮ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ