ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ
Team Udayavani, Oct 19, 2021, 7:10 AM IST
ಹೊಸದಿಲ್ಲಿ: ಕೇರಳದ ಮಳೆ, ಪ್ರವಾಹ, ಭೂಕುಸಿತಕ್ಕೆ 35 ಮಂದಿ ಸಾವಿಗೀಡಾದ ಬೆನ್ನಲ್ಲೇ ದೇಶದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯಲಾರಂಭಿಸಿದೆ.
ದಿಲ್ಲಿ, ಉತ್ತರಾಖಂಡ, ಪಂಜಾಬ್, ಹರಿಯಾಣ, ರಾಜಸ್ಥಾನ, ತಮಿಳುನಾಡು, ಪುದುಚೇರಿ, ಮಧ್ಯಪ್ರದೇಶ, ಉತ್ತರಪ್ರದೇಶ, ಪಶ್ಚಿಮ ಬಂಗಾಲ ಸೇರಿದಂತೆ ಹಲವು ರಾಜ್ಯಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಉತ್ತರಾಖಂಡದಲ್ಲಿ ಮಳೆ ಸಂಬಂಧಿ ಘಟನೆಗೆ ಸೋಮವಾರ ಮೂವರು ಬಲಿಯಾಗಿದ್ದಾರೆ. ಉತ್ತರಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಬುಧಾನಾ ನಗರದಲ್ಲಿ ನಡೆಯಬೇಕಾಗಿದ್ದ ಎಸ್ಪಿ ನಾಯಕ ಅಖೀಲೇಶ್ ಯಾದವ್ ಅವರ ರ್ಯಾಲಿ ರದ್ದುಗೊಂಡಿದೆ. ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ, ಪಶ್ಚಿಮ ಬಂಗಾಲದಲ್ಲೂ ಭಾರೀ ಮಳೆಯಾಗುತ್ತಿದೆ. ಮಂಗಳವಾರವೂ ದಕ್ಷಿಣ ಬಂಗಾಲದ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುವುದಾಗಿ ಹವಾಮಾನ ಇಲಾಖೆ ಎಚ್ಚರಿಸಿದೆ.
ಪ್ರಚಾರ ಮುಂದೂಡಿಕೆ: ಮಧ್ಯಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತಮ್ಮ ಚುನಾವಣ ಪ್ರಚಾರ ಸಭೆಯನ್ನು ಮುಂದೂಡಿದ್ದಾರೆ. ಲೋಕಸಭಾ ಉಪಚುನಾವಣೆ ನಡೆಯಲಿರುವ ಖಾಂಡ್ವಾಗೆ ಅವರು ಪ್ರಯಾಣ ಬೆಳೆಸಬೇಕಾಗಿತ್ತು.
ಇದನ್ನೂ ಓದಿ:ಸಾಸಿವೆ ಜಾತಿಯ ಗಿಡದಿಂದ ಜೆಟ್ ಇಂಧನ!
ಹಳೆಯ ದಾಖಲೆ ಅಳಿಸಿದ ದಿಲ್ಲಿ ಮಳೆ
ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಈ ತಿಂಗಳ ಆರಂಭದಿಂದ ಮಧ್ಯಭಾಗದವರೆಗೆ 94.6 ಮಿ.ಮೀ.ನಷ್ಟು ಮಳೆಯಾಗಿದ್ದು, 1960ರ ಅಕ್ಟೋಬರ್ನಲ್ಲಿ ಸುರಿದಿದ್ದ ದಾಖಲೆಯನ್ನು ಈ ಮಳೆ ಅಳಿಸಿಹಾಕಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 1960ರ ಅಕ್ಟೋಬರ್ನಲ್ಲಿ ದಿಲ್ಲಿಯಲ್ಲಿ 93.4 ಮಿ.ಮೀ. ಮಳೆಯಾಗಿತ್ತು ಎಂದು ಹೇಳಿದೆ. 60ರ ದಶಕದ ಹಿಂದೆ ದಿಲ್ಲಿಯಲ್ಲಿ ಇನ್ನೂ ಹೆಚ್ಚಾಗಿ ಮಳೆ ಸುರಿಯುತ್ತಿತ್ತು ಎಂಬ ಕುತೂಹಲಕಾರಿ ವಿಚಾರ ತಿಳಿಸಿರುವ ಇಲಾಖೆ ಅದಕ್ಕೆ ಪೂರಕವಾದ ದಾಖಲೆಗಳನ್ನೂ ಬಿಡುಗಡೆ ಮಾಡಿದೆ. 1910ರ ಅಕ್ಟೋಬರ್ನಲ್ಲಿ 185.9 ಮಿ.ಮೀ., 1954ರ ಅಕ್ಟೋಬರ್ನಲ್ಲಿ 238.2 ಮಿ.ಮೀ., 1956ರ ಅಕ್ಟೋಬರ್ನಲ್ಲಿ 236.2 ಮಿ.ಮೀ. ಮಳೆಯಾಗಿತ್ತೆಂದು ದತ್ತಾಂಶಗಳಲ್ಲಿ ಉಲ್ಲೇಖೀಸಲಾಗಿದೆ.
ವಧೂ-ವರರ ಸ್ಪೆಷಲ್ ಗಾಡಿ
ಮಳೆ, ಪ್ರವಾಹ ಪೀಡಿತ ಕೇರಳದಲ್ಲಿ ವಧು-ವರರು ಮದುವೆ ಮಂಟಪಕ್ಕೆ ತೆರಳಲೂ ಒದ್ದಾಡಿರುವ ಘಟನೆ ನಡೆದಿದೆ. ಕೊನೆಗೆ ಆ ಜೋಡಿ ದೊಡ್ಡದೊಂದು ಅಲ್ಯೂಮಿನಿಯಂ ಪಾತ್ರೆಯಲ್ಲಿ ಕುಳಿತಿದ್ದು, ಪ್ರವಾಹದ ನೀರಿನಲ್ಲೇ ಆ ಪಾತ್ರೆಯನ್ನು ಬೇರೆಯವರು ತಳ್ಳಿಕೊಂಡು ಹೋಗಿ ಮದುವೆ ಮಂಟಪವನ್ನು ತಲುಪಿಸಿದ್ದಾರೆ. ಈ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅವರಿಬ್ಬರೂ ಅಲಪ್ಪುಳ ನಿವಾಸಿಗಳಾಗಿದ್ದು, ಥಲವಾಡಿಯ ಕಲ್ಯಾಣಮಂಟಪದಲ್ಲಿ ಸೋಮವಾರ ಮದುವೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ