ರಾಜ್ ಕುಂದ್ರಾಗೆ ಬಂಧನದಿಂದ ರಕ್ಷಣೆ
Team Udayavani, Aug 19, 2021, 7:00 AM IST
ಮುಂಬಯಿ: ನೀಲಿ ಚಿತ್ರಗಳ ನಿರ್ಮಾಣ ಆರೋಪಕ್ಕೆ ಬಂಧಿತರಾಗಿರುವ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಬಾಂಬೆ ಹೈ ಕೋರ್ಟ್ ಮಧ್ಯಾಂತರ ರಕ್ಷಣೆ ನೀಡಿದೆ.
ಇದೇ ಪ್ರಕರಣಕ್ಕೆ ಅವರು ಜುಲೈಯಲ್ಲಿ ಬಂಧಿತರಾಗಿದ್ದು ಜೈಲಿನಲ್ಲಿ ಇದ್ದಾರೆ. ಆ.25ರಂದು ಬಾಂಬೆ ಹೈಕೋರ್ಟ್ ಅವರ ಅರ್ಜಿಯ ವಿಚಾರಣೆಯನ್ನು ಮತ್ತೆ ಕೈಗೆತ್ತಿಕೊಳ್ಳಲಿದೆ. ಹೀಗಾಗಿ, 2020ರ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದ್ರಾ ಅವರನ್ನು ಪೊಲೀಸರು ಮತ್ತೆ ಬಂಧಿಸದಂತೆ ಮಧ್ಯಾಂತರ ರಕ್ಷಣೆ ನೀಡಿರುವುದಾಗಿ ನ್ಯಾ| ಎಸ್.ಕೆ.ಶಿಂಧೆ ನೇತೃತ್ವದ ನ್ಯಾಯಪೀಠ ಬುಧವಾರ ತಿಳಿಸಿದೆ.
ಕುಂದ್ರಾ ಜಾಮೀನು ಅರ್ಜಿಯನ್ನು ಕೆಳ ಹಂತದ ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ಮತ್ತೋರ್ವ ಆರೋಪಿಗೆ ಜಾಮೀನು ನೀಡಿರುವಂತೆಯೇ ರಾಜ್ ಕುಂದ್ರಾಗೂ ಜಾಮೀನು ನೀಡಬೇಕೆಂದು ಅವರ ಪರ ವಕೀಲರು ವಾದಿಸಿದ್ದರು. ಆದರೆ ಪ್ರಕರಣದಲ್ಲಿ ರಾಜ್ ಕುಂದ್ರಾ ಪಾತ್ರ ಬೇರೆಯದ್ದೇ ರೀತಿಯಲ್ಲಿದೆ, ಹಾಗಾಗಿ ಜಾಮೀನು ನೀಡಬಾರದು ಎಂದು ಹೆಚ್ಚುವರಿ ಸರಕಾರಿ ವಕೀಲೆ ಪ್ರಜಕ್ತಾ ಶಿಂಧೆ ವಿರೋಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು