ನೂಪುರ್ ಶರ್ಮಾ ಬೆಂಬಲಕ್ಕೆ ರಾಜ್ ಠಾಕ್ರೆ: ಝಾಕಿರ್ ನಾಯ್ಕ್ ಹೇಳಿಲ್ಲವೇ?
Team Udayavani, Aug 23, 2022, 5:30 PM IST
ಮುಂಬಯಿ: ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ ನೀಡುವ ಮೂಲಕ ವಿವಾದಗಳಲ್ಲಿ ಸಿಲುಕಿರುವ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದಾರೆ. ಅಮಾನತುಗೊಂಡಿರುವ ಬಿಜೆಪಿ ವಕ್ತಾರೆಯನ್ನು ಬೆಂಬಲಿಸಿದ ಅವರು, “ಎಲ್ಲರೂ ಕ್ಷಮೆಯಾಚಿಸುವಂತೆ ಕೇಳಿದ್ದರು. ಆದರೆ ನೂಪುರ್ ಶರ್ಮಾ ಹೇಳಿದ್ದನ್ನೇ ಜಾಕಿರ್ ನಾಯ್ಕ್ ಕೂಡ ಈ ಹಿಂದೆಯೇ ಹೇಳಿದ್ದರು. ಯಾರೂ ಝಾಕಿರ್ ಕ್ಷಮೆ ಕೇಳಲಿಲ್ಲ” ಎಂದು ಹೇಳಿದರು.
ರಾಷ್ಟ್ರೀಯ ಮಾಧ್ಯಮವೊಂದರ ಜತೆ ಮಾತನಾಡಿದ ರಾಜ್ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ. ಈ ವೇಳೆ ಅವರು ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಅವರನ್ನು ಗುರಿಯಾಗಿಸಿಕೊಂಡು, ಹಿಂದೂ ದೇವರು ಮತ್ತು ದೇವತೆಗಳ ಬಗ್ಗೆ ಹಲವು ಬಾರಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದರು.
ಮೇ ತಿಂಗಳ ಕೊನೆಯ ವಾರದಲ್ಲಿ ಟಿವಿ ವಾಹಿನಿಯೊಂದರಲ್ಲಿ ನಡೆದ ಚರ್ಚೆಯಲ್ಲಿ ನೂಪುರ್ ಶರ್ಮಾ ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಸಾಕಷ್ಟು ಗದ್ದಲ ಎದ್ದಿದ್ದು, ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು.ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದಕ್ಕಾಗಿ ಪುಣೆಯ ಉಮೇಶ್ ಕೋಲ್ಹೆ ಮತ್ತು ಉದಯಪುರದ ಕನ್ಹಯ್ಯಾಲಾಲ್ ಅವರನ್ನೂ ಹತ್ಯೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ