ಉಮರ್, ಫಾರೂಖ್ ಮತ್ತು ಮುಫ್ತಿ ಶೀಘ್ರ ಬಿಡುಗಡೆಗೆ ಪ್ರಾರ್ಥಿಸುತ್ತೇನೆ: ರಾಜನಾಥ್ ಸಿಂಗ್
Team Udayavani, Feb 23, 2020, 11:24 AM IST
ಹೊಸದಿಲ್ಲಿ: ಗೃಹ ಬಂಧನದಲ್ಲಿರುವ ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಉಮರ್ ಅಬ್ಧುಲ್ಲಾ, ಫಾರೂಖ್ ಅಬ್ದೂಲ್ಲಾ ಮತ್ತು ಮುಫ್ತಿ ಮೆಹಬೂಬಾ ಅವರ ಶೀಘ್ರ ಬಿಡುಗಡೆಗಾಗಿ ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಉಮರ್ ಅಬ್ಧುಲ್ಲಾ, ಫಾರೂಖ್ ಅಬ್ದೂಲ್ಲಾ ಮತ್ತು ಮುಫ್ತಿ ಮೆಹಬೂಬಾ ಸೇರಿದಂತೆ ಕಾಶ್ಮೀರದ ಹಲವು ರಾಜಕಾರಣಿಗಳನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ಈ ಗೃಹ ಬಂಧನ ಇಂದಿಗೂ ಮುಂದುವರಿದಿದೆ.
ಸುದ್ದಿವಾಹಿನಿಯೊಂದಕ್ಕೆ ಮಾತನಾಡುವ ವೇಳೆ ರಾಜನಾಥ್ ಸಿಂಗ್ ಅವರು ಈ ಮಾತನ್ನು ಹೇಳಿದರು. ಕಾಶ್ಮೀರದಲ್ಲಿ ಸದ್ಯ ಶಾಂತಿ ನೆಲೆಸಿದೆ. ಪರಿಸ್ಥಿತಿ ಸುಧಾರಿಸಿದೆ. ಈ ಹಿನ್ನಲೆಯಲ್ಲಿ ರಾಜಕೀಯ ನಾಯಕರನ್ನು ಬಿಡುಗಡೆ ಮಾಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳುತ್ತೇವೆ ಎಂದ ಅವರು ಸರಕಾರ ಯಾರಿಗೂ ಕಿರುಕುಳ ನೀಡಿಲ್ಲ. ಭದ್ರತೆಯ ಕಾರಣಕ್ಕಾಗಿ ಮಾತ್ರ ಕೆಲ ಕಠಿಣ ನಿರ್ಧಾರಗಳನ್ನು ಕೈಗೊಳ್ಳಲಾಗಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ