ನಾವಿಬ್ಬರೂ ಒಂದು ಎಂದ ಅಶೋಕ್ ಗೆಹ್ಲೋಟ್, ಪೈಲಟ್ ಸಚಿನ್
Team Udayavani, Nov 29, 2022, 9:46 PM IST
ನವದೆಹಲಿ:ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಡಿಸಿಎಂ ಸಚಿನ್ ಪೈಲಟ್ “ನಾವಿಬ್ಬರೂ ಒಂದು’ ಎಂಬ ಸಂದೇಶ ಸಾರಲು ಮುಂದಾಗಿದ್ದಾರೆ.
ಸಂದರ್ಶನವೊಂದರಲ್ಲಿ ಪೈಲಟ್ ಅವರನ್ನು “ವಿಶ್ವಾಸಘಾತುಕ’ ಎಂದು ಹೇಳಿ ವಿವಾದ ಸೃಷ್ಟಿಸಿದ ಬಳಿಕ ಕಾಂಗ್ರೆಸ್ ವರಿಷ್ಠ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದರು. ಇದಾದ ಬಳಿಕ ಇಬ್ಬರು ನಾಯಕರು ನವದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದಾರೆ.
ಡಿ.4ರಂದು ಭಾರತ್ ಜೋಡೋ ಯಾತ್ರೆ ರಾಜಸ್ಥಾನ ಪ್ರವೇಶಿಸಲಿರುವುದರಿಂದ ಮಂಗಳವಾರದ ಭೇಟಿ ಪ್ರಾಮುಖ್ಯತೆ ಪಡೆದಿದೆ. “ನಮಗೆ ಪಕ್ಷವೇ ಪ್ರಧಾನ. ಕಳೆದು ಹೋಗಿರುವ ವರ್ಚಸ್ಸನ್ನು ಮರು ಸ್ಥಾಪಿಸುವುದೇ ಆದ್ಯತೆ’ ಎಂದು ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಶಾಸಕ ಸಚಿನ್ ಪೈಲಟ್ ಮಾತನಾಡಿ “ಭಾರತ್ ಜೋಡೋ ಯಾತ್ರೆಯನ್ನು ರಾಜ್ಯದಲ್ಲಿ ಯಶಸ್ಸುಗೊಳಿಸುತ್ತೇವೆ. ಅದಕ್ಕೆ ಅದ್ಧೂರಿ ಸ್ವಾಗತ ನೀಡುತ್ತೇವೆ’ ಎಂದರು. ಇಂದೋರ್ನಲ್ಲಿ ಮಾತನಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗೆಹ್ಲೋಟ್ ಮತ್ತು ಪೈಲಟ್ ಪಕ್ಷದ ಆಸ್ತಿ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್