ರಾಜಸ್ಥಾನ: ಕಾಂಗ್ರೆಸ್ ಶಾಸಕ ಪಾನಾ ಚಂದ್ ಮೆಘವಾಲ್ ರಾಜೀನಾಮೆ
Team Udayavani, Aug 16, 2022, 7:00 AM IST
ಜೈಪುರ: ಕುಡಿಯುವ ನೀರಿನ ಮಡಿಕೆಯನ್ನು ಸ್ಪರ್ಶಿಸಿದ ದಲಿತ ಬಾಲಕ ಶಿಕ್ಷಕನ ಥಳಿತದಿಂದ ಸಾವಿಗೀಡಾದ ಘಟನೆಯನ್ನು ಖಂಡಿಸಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಶಾಸಕರೊಬ್ಬರು ರಾಜೀನಾಮೆ ಸಲ್ಲಿಸಿದ್ದಾರೆ. ಅವರು ರಾಜೀನಾಮೆಯನ್ನು ಸಿಎಂ ಅಶೋಕ್ ಗೆಹ್ಲೋಟ್ ಅವರಿಗೆ ಕಳುಹಿಸಿಕೊಟ್ಟಿದ್ದು, ಕೆಲವು ವರ್ಷಗಳಿಂದ ದಲಿತರ ವಿರುದ್ಧ ರಾಜ್ಯದಲ್ಲಿ ದೌರ್ಜನ್ಯಗಳು ಹೆಚ್ಚುತ್ತಿವೆ.
ದಲಿತ ಸಮುದಾಯವನ್ನು ರಕ್ಷಿಸಲು ಸಾಧ್ಯವಾಗದೆ ಇರುವುದರಿಂದ ಶಾಸಕನಾಗಿ ಮುಂದುವರಿ ಯುವ ಹಕ್ಕು ತನಗಿಲ್ಲ ಎಂದವರು ತನ್ನ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಪಾನಾ ಚಂದ್ ಮೆಘವಾಲ್ ರಾಜೀನಾಮೆ ನೀಡಿರುವ ಶಾಸಕ. ಅವರು ತನ್ನ ರಾಜೀನಾಮೆ ಪ್ರತಿಯನ್ನು ಸ್ಪೀಕರ್ ಅವರಿಗೂ ಕಳುಹಿಸಿ ಕೊಟ್ಟಿದ್ದಾರೆ. ಮಡಿಕೆಯಿಂದ ನೀರು ಕುಡಿಯುವುದು, ಮೀಸೆ ಇರಿಸಿ ಕೊಂಡಿರುವುದು, ಕತ್ತೆಯ ಮೇಲೆ ಸವಾರಿ ಮಾಡುವುದು ಮುಂತಾದ ಕ್ಷುಲ್ಲಕ ಕಾರಣಗಳಿಗಾಗಿ ರಾಜಸ್ಥಾನದಲ್ಲಿ ದಲಿತರನ್ನು ಕೊಲ್ಲಲಾಗುತ್ತಿದೆ. ಇದರ ಬಗ್ಗೆ ಪೊಲೀಸರ ತನಿಖೆಯೂ ಹಳ್ಳ ಹಿಡಿಯುತ್ತಿದೆ ಎಂದು ಮೇಘವಾಲ್ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ