ಚಲಿಸುವ ರೈಲಿನಿಂದ ಬಿದ್ದ ತಾತ : ಕ್ಷಣಾರ್ಧದಲ್ಲಿ ಕಾಪಾಡಿದ ಭದ್ರತಾ ಸಿಬ್ಬಂದಿ!
Team Udayavani, Apr 3, 2021, 3:57 PM IST
ರಾಜಸ್ಥಾನ : ರೈಲ್ವೆ ಪ್ಲಾಟ್ ಫಾರ್ಮ್ ಗಳಲ್ಲಿ ಜಾಗರೂಕತೆ ಇಂದ ಇರಬೇಕು, ರೈಲು ಬೋಗಿಗಳ ಬಾಗಿಲುಗಳಲ್ಲಿ ನಿಲ್ಲಬಾರದು ಎಂದು ಯಾವಾಗಲೂ ಭದ್ರತಾ ಸಿಬ್ಬಂದಿ ಹೇಳುತ್ತಲೇ ಇರುತ್ತಾರೆ. ಆದ್ರೆ ಕೆಲವೊಂದು ಬಾರಿ ಅಚಾನಕ್ಕಾಗಿ ಒಂದೊಂದು ದುರ್ಘಟನೆಗಳು ನಡೆಯುತ್ತವೆ. ಇಂತಹದ್ದೇ ಒಂದು ಆತಂಕದ ಘಟನೆ ರಾಜಸ್ಥಾನದ ಸವಾಯ್ ಮಾಧೋಪೂರ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಹೌದು ಚಲಿಸುವ ರೈಲುಗಾಡಿಯಿಂದ ವೃದ್ಧರೊಬ್ಬರು ಕೆಳಗಡೆ ಬಿದ್ದ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಲ್ಲಿ ವಯಸ್ಸಾದ ವೃದ್ಧರೊಬ್ಬರು ಪ್ರಾಯಾಣ ಮಾಡುತ್ತಿದ್ದು, ನಿಲ್ದಾಣದಲ್ಲಿ ಇಳಿಯಲೆಂದು ರೈಲು ಬೋಗಿ ಬಾಗಿಲಿಗೆ ಬಂದು ನಿಂತಿದ್ದಾರೆ. ಆ ವೇಳೆ ವೃದ್ಧನಿಗೆ ಆಯತಪ್ಪಿ ಕೆಳಗಡೆ ಬಿದ್ದಿದ್ದಾರೆ. ತಕ್ಷಣ ಅಲ್ಲೇ ಇದ್ದ ಭದ್ರತಾ ಸಿಬ್ಬಂದಿ ಆ ತಾತನನ್ನು ಸುರಕ್ಷಿತ ಸ್ಥಳಕ್ಕೆ ಎಳೆದಿದ್ದಾರೆ. ಈ ವಿಡಿಯೋವನ್ನು ಕೇಂದ್ರ ರೈಲ್ವೆ ಮಂತ್ರಿ ಪಿಯುಶ್ ಗೋಯಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.
राजस्थान के सवाई माधोपुर स्टेशन पर एक बुजुर्ग यात्री को ड्यूटी पर तैनात सुरक्षा कर्मी द्वारा त्वरित कार्रवाई करते हुए ट्रेन की चपेट में आने से बचाया गया।
अपने सुरक्षाकर्मियों पर हमें गर्व है, जो पूरे सेवाभाव के साथ अपने दायित्व का निर्वहन कर रहे हैं। pic.twitter.com/qghECbmTZo
— Piyush Goyal (@PiyushGoyal) April 2, 2021
ವಿಡಿಯೋ ಶೇರ್ ಮಾಡಿ ಬರೆದಿರುವ ಕೇಂದ್ರ ಸಚಿವ, ರಾಜಸ್ಥಾನದ ಸವಾಯಿ ಮಾಧೋಪುರ್ ನಿಲ್ದಾಣದಲ್ಲಿ, ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿಯ ಕೆಲಸದಿಂದ ಅಪಾಯದಲ್ಲಿ ವೃದ್ಧ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುವ ನಮ್ಮ ಭದ್ರತಾ ಸಿಬ್ಬಂದಿಗಳ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ