ಕಣ್ಣೀರು ತಂದ ಕಂದಮ್ಮನ ನಡೆ
Team Udayavani, Jul 16, 2018, 8:15 AM IST
ಜೈಪುರ: ಕಾಶ್ಮೀರದಲ್ಲಿ ಉಗ್ರರೊಂದಿಗೆ ಹೋರಾಡಿ ಹುತಾತ್ಮರಾದ ಮುಕುತ್ ಬಿಹಾರಿ ಮೀನಾ (25) ಅವರ ಪಾರ್ಥಿವ ಶರೀರ ಜೈಪುರದಲ್ಲಿರುವ ಅವರ ಗ್ರಾಮಕ್ಕೆ ಬಂದಾಗ ನಡೆದ ಘಟನೆಯೊಂದು ದೇಶವಾಸಿಗಳಲ್ಲಿ ಕಣ್ಣೀರು ತರಿಸಿದೆ. ತ್ರಿವರ್ಣ ಧ್ವಜವನ್ನು ಹೊದಿಸಿದ ಯೋಧನ ಪಾರ್ಥಿವ ಶರೀರವನ್ನು ಅವರ ಮನೆಯ ಆವರಣದಲ್ಲಿ ಇಟ್ಟೊಡನೆ, ಅವರ ಪುಟ್ಟ ಮಗುವು ಪಾರ್ಥಿವ ಶರೀರದ ಮೇಲೆ ಬಂದು ಕುಳಿತು, ಅಪ್ಪನ ಮುಖವನ್ನೇ ದಿಟ್ಟಿಸಿ ನೋಡುತ್ತಿದ್ದ ದೃಶ್ಯವು ಎಂಥ ಕಲ್ಲು ಹೃದಯವನ್ನೂ ಕರಗಿಸುವಂತಿತ್ತು. ಈ ಘಟನೆಗೆ ಸಾಕ್ಷಿಯಾದ ಜಲಾವರ್ ನ ಜಿಲ್ಲಾಧಿಕಾರಿ ಜಿತೇಂದ್ರ ಸೋನಿ ಅವರು ಫೇಸ್ ಬುಕ್ ನಲ್ಲಿ ಆ ಮಗುವಿಗೆ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ.
‘ನೀನು ಬಂದು ಅಪ್ಪನ ಮೃತದೇಹದ ಮೇಲೆ ಕುಳಿತಿದ್ದನ್ನು, ಸ್ವಲ್ಪವೂ ಅಳದೇ ಅಪ್ಪನನ್ನೇ ದಿಟ್ಟಿಸುತ್ತಿದ್ದುದನ್ನು ನೋಡಿದ ನಮ್ಮ ಮನಗಳಲ್ಲಿ ದುಃಖ ಉಮ್ಮಳಿಸಿ ಬಂದಿತ್ತು. ಆ ಕ್ಷಣದಲ್ಲಿ ನಿನ್ನ ಮುಗ್ಧತೆ, ನಿನ್ನ ತಂದೆಯ ತ್ಯಾಗ ಮಾತ್ರವೇ ನಮ್ಮನ್ನು ಆವರಿಸಿತ್ತು. ಇಡೀ ದೇಶದ ನಾಗರಿಕರ ಹಾರೈಕೆ ನಿನ್ನ ಮೇಲಿರುತ್ತದೆ. ಚೆನ್ನಾಗಿರು ಕಂದಾ’ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ