ರಾಜಸ್ಥಾನದಲ್ಲಿ ಹೆಣ್ಣುಮಕ್ಕಳ ಹರಾಜು!
ರಾಷ್ಟ್ರೀಯ ಮಹಿಳಾ ಆಯೋಗದಿಂದ ಸತ್ಯಶೋಧನಾ ಸಮಿತಿ ರಚನೆ
Team Udayavani, Oct 29, 2022, 7:40 AM IST
ನವದೆಹಲಿ: ರಾಜಸ್ಥಾನದ ಭಿಲ್ವಾರದಲ್ಲಿ ಸಾಲ ಮರುಪಾವತಿ ಮಾಡಲಾಗದೇ ಅಥವಾ ಮಾಡಲಿಕ್ಕಾಗಿ ತಮ್ಮ ಹೆಣ್ಣುಮಕ್ಕಳನ್ನೇ ಕೆಲವರು ಹರಾಜು ಹಾಕಿದ ಘಟನೆ ನಡೆದಿದೆ.
ಕೆಲವರು ಮುದ್ರಾ ಪತ್ರದ (ಸ್ಟಾಂಪ್ ಪೇಪರ್) ಮೇಲೆ ಲಿಖಿತವಾಗಿ ಬರೆದು ಸಹಿಹಾಕಿ ವೇಶ್ಯಾವಾಟಿಕೆಗೆ ಕಳುಹಿಸಿಕೊಟ್ಟಿದ್ದಾರೆ. ಈ ಸುದ್ದಿ ಬಹಿರಂಗವಾದ ಕೂಡಲೇ ರಾಷ್ಟ್ರೀಯ ಮಹಿಳಾ ಆಯೋಗ ಇಬ್ಬರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದೆ.
ಈ ಬಗ್ಗೆ ರಾಜಸ್ಥಾನದ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಸರ್ಕಾರಿ ಕಾರ್ಯದರ್ಶಿಗೆ ಪತ್ರ ಬರೆದು ತಕ್ಷಣ ಆರೋಪಿಗಳ ಮೇಲೆ ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಬೇಕೆಂದು ಸೂಚಿಸಿದೆ.
ರಾಜಸ್ಥಾನದ ಪ್ರಕರಣ ಎಷ್ಟು ಅಮಾನವೀಯವಾಗಿದೆಯೆಂದರೆ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ, ಕೆಲ ಹೆಣ್ಣುಮಕ್ಕಳ ತಾಯಂದಿರನ್ನು ಜಾತಿ ಪಂಚಾಯ್ತಿಗಳಿಗೆ ಸೇರಿದ ವ್ಯಕ್ತಿಗಳು ಅತ್ಯಾಚಾರ ಮಾಡಿದ್ದಾರೆ ಎಂದೂ ಹೇಳಲಾಗಿದೆ.
ಹಾಗೆಯೇ ರಾಷ್ಟ್ರೀಯ ಮಕ್ಕಳ ರಕ್ಷಣಾ ಸಂಸ್ಥೆಯ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ನ.7ರಂದು ಭಿಲ್ವಾರಕ್ಕೆ ಭೇಟಿ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ