ರಾಜಸ್ಥಾನ : ಗುಜ್ಜರ್ ಸಹಿತ 5 ಸಮುದಾಯಗಳಿಗೆ ಶೇ.1 ಮೀಸಲಾತಿ
Team Udayavani, Jul 2, 2018, 6:57 PM IST
ಜೈಪುರ : ಅತೀ ಹಿಂದುಳಿದ ವರ್ಗಗಳ ಕೆಟಗರಿಯಡಿ ರಾಜಸ್ಥಾನ ಸರಕಾರ ಇಂದು ಸೋಮವಾರ ಗುಜ್ಜರ್ ಸಮುದಾಯ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿಗೆ ಅನುಮೋದನೆ ನೀಡಿದೆ.
ಇದೇ ಜುಲೈ 7ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜೈಪುರ ರಾಲಿ ನಡೆಯುವುದಕ್ಕೆ ಪೂರ್ವಭಾವಿ ಎಂಬಂತೆ ಈ ಮೀಸಲಾತಿಯನ್ನು ರಾಜಸ್ಥಾನ ಸರಕಾರ ಪ್ರಕಟಿಸಿದೆ.
ಪ್ರಧಾನಿ ಮೋದಿ ಅವರ ರಾಲಿ ನಡೆಯುವ ತಾಣದಲ್ಲೇ ತಾವು ಮೀಸಲಾತಿಯನ್ನು ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ಗುಜ್ಜರ್ ಸಮುದಾಯದವರು ಈ ಮೊದಲು ಬೆದರಿಕೆ ಹಾಕಿದ್ದರು.
ಪ್ರಧಾನಿ ಮೋದಿ ಅವರು ತಮ್ಮ ರಾಲಿ ನಡೆಯುವ ತಾಣದಲ್ಲೇ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಭೇಟಿಯಾಗುವರು.
ಶೇ. 1ರ ಮೀಸಲಾತಿಯ ಲಾಭ ಪಡೆಯುವ ಸಮುದಾಯಗಳೆಂದರೆ ಗೋದಿಯಾ ಲೋಹರ್, ಬಂಜಾರಾ, ಗುಜ್ಜರ್, ರೈಕಾ ಮತ್ತು ಗಡಾರಿಯಾ.
ಈ ಸಮುದಾಯಗಳಿಗೆ ಶೇ.1ರ ಮೀಸಲಾತಿಯನ್ನು ಕಲ್ಪಿಸುವ ದಿಶೆಯಲ್ಲಿ ಸರಕಾರ ಎರಡು ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ. ಮೊದಲನೇಯದು ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಕ್ಕೆ ಸಂಬಂಧಿಸಿದ ಮೀಸಲಾತಿ. ಎರಡನೇದು ಸರಕಾರಿ ಉದ್ಯೋಗಗಳಲ್ಲಿನ ಮೀಸಲಾತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್