ರಾಜಸ್ಥಾನ ರಾಜಕೀಯ; ವಿಚಾರಣೆ ಸೋಮವಾರಕ್ಕೆ, ಪೈಲಟ್ ಅರ್ಜಿ ಬಗ್ಗೆ ಹೈಕೋರ್ಟ್ ಹೇಳಿದ್ದೇನು?
ಪೈಲಟ್ ಹಾಗೂ 18 ಮಂದಿ ಶಾಸಕರಿಗೆ ರಾಜಸ್ಥಾನ್ ವಿಧಾನಸಭಾ ಸ್ಪೀಕರ್ ಅನರ್ಹಗೊಳಿಸುವ ನಿಟ್ಟಿನಲ್ಲಿ ನೋಟಿಸ್ ಜಾರಿ ಮಾಡಿದ್ದರು.
Team Udayavani, Jul 17, 2020, 5:43 PM IST
ಜೈಪುರ್: ಸಚಿನ್ ಪೈಲಟ್ ಹಾಗೂ 18 ಮಂದಿ ಬಂಡಾಯ ಶಾಸಕರನ್ನು ಸ್ಪೀಕರ್ ಶೀಘ್ರವೇ ಅನರ್ಹಗೊಳಿಸಬಾರದು ಅಥವಾ ಯಾವುದೇ ರೀತಿಯ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿರುವ ರಾಜಸ್ಥಾನ್ ಹೈಕೋರ್ಟ್ ಶಾಸಕತ್ವ ಅನರ್ಹಗೊಳಿಸುವ ವಿಚಾರಣೆಯನ್ನು ಜುಲೈ20ಕ್ಕೆ ಮುಂದೂಡಿದೆ.
ಪಕ್ಷದ ಶಾಸಕಾಂಗ ಸಭೆಗೆ ಗೈರು ಹಾಜರಾಗಿದ್ದ ಸಚಿನ್ ಪೈಲಟ್ ಹಾಗೂ 18 ಮಂದಿ ಶಾಸಕರಿಗೆ ರಾಜಸ್ಥಾನ್ ವಿಧಾನಸಭಾ ಸ್ಪೀಕರ್ ಅನರ್ಹಗೊಳಿಸುವ ನಿಟ್ಟಿನಲ್ಲಿ ನೋಟಿಸ್ ಜಾರಿ ಮಾಡಿದ್ದರು. ಏತನ್ಮಧ್ಯೆ ಪೈಲಟ್ ಹಾಗೂ ಬಂಡಾಯ ಶಾಸಕರು ರಾಜಸ್ಥಾನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸೋಮವಾರಕ್ಕೆ ವಿಚಾರಣೆ ಮುಂದೂಡಿದೆ.
ಅಲ್ಲದೇ ಸ್ಪೀಕರ್ ಪೈಲಟ್ ಆಗಲಿ ಬಂಡಾಯ ಶಾಸಕರ ವಿರುದ್ಧವಾಗಲಿ ಜುಲೈ 21ರ ಸಂಜೆ 5.30ರವರೆಗೆ ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.
ಕಾಂಗ್ರೆಸ್ ಮುಖಂಡ ಅಭಿಷೇಕ್ ಮನುಸಿಂಘ್ವಿ ಸ್ಪೀಕರ್ ಕಚೇರಿ ಪರ ವಕೀಲರಾಗಿದ್ದು, ಹರೀಶ್ ಸಾಳ್ವೆ, ಮುಕುಲ್ ರೋಹ್ಟಗಿ ಕೇಂದ್ರದ ಪ್ರತಿನಿಧಿ ವಕೀಲರಾಗಿದ್ದಾರೆ. ಇವರಿಬ್ಬರು ಪೈಲಟ್ ಪರ ವಾದ ಮಂಡಿಸಲಿದ್ದಾರೆ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್