ರಾಜಸ್ಥಾನ: ಅನರ್ಹತೆ ನೋಟಿಸ್‌ ಪ್ರಶ್ನಿಸಿ ಬಂಡಾಯ ಶಾಸಕರು ಹೈಕೋರ್ಟ್‌ಗೆ

ಇಂದು ಸಂಜೆ 5ರ ವರೆಗೆ ಯಾವುದೇ ಕ್ರಮವಿಲ್ಲ

Team Udayavani, Jul 17, 2020, 6:15 AM IST

ರಾಜಸ್ಥಾನ: ಅನರ್ಹತೆ ನೋಟಿಸ್‌ ಪ್ರಶ್ನಿಸಿ ಬಂಡಾಯ ಶಾಸಕರು ಹೈಕೋರ್ಟ್‌ಗೆ

ರಾಜಸ್ಥಾನ ಹೈಕೋರ್ಟ್.

ಜೈಪುರ/ಹೊಸದಿಲ್ಲಿ: ರಾಜಸ್ಥಾನದಲ್ಲಿ ಸಚಿನ್‌ ಪೈಲಟ್‌ ಗುಂಪಿನ ಬಂಡಾಯ ಅಲ್ಲಿನ ಹೈಕೋರ್ಟ್‌ ರಾತ್ರಿ ವಿಚಾರಣೆಗೂ ಕಾರಣವಾಗಿದೆ.

ಅನರ್ಹತೆ ನೋಟಿಸ್‌ ಪ್ರಶ್ನಿಸಿ ಬಂಡಾಯ ಶಾಸಕರು ಸಲ್ಲಿಸಿರುವ ಹೊಸ ಅರ್ಜಿಯ ವಿಚಾರಣೆ ಗುರುವಾರ ರಾತ್ರಿಯೇ ನಡೆಯಿತು.

ಗುರುವಾರ ಅಪರಾಹ್ನ 3 ಗಂಟೆಗೊಮ್ಮೆ, ಸಂಜೆ 5 ಗಂಟೆಗೆ ಇನ್ನೊಮ್ಮೆ ಅರ್ಜಿ ವಿಚಾರಣೆಗೆ ಬಂದಿತ್ತು. ಆದರೆ ಇದನ್ನು ವಿಭಾಗೀಯ ಪೀಠಕ್ಕೆ ರವಾನಿಸಿದ್ದರಿಂದ ರಾತ್ರಿ 7.30ರ ವೇಳೆಗೆ ವಿಚಾರಣೆಗೆ ಕೈಗೆತ್ತಿಕೊಳ್ಳಲಾಯಿತು.
ವಿಚಾರಣೆಯನ್ನು ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಮುಂದೂಡಿದ ನ್ಯಾಯಾಲಯವು ಅಂದು ಸಂಜೆ 5ರ ವರೆಗೆ ಸಚಿನ್‌ ಸಹಿತ ಯಾವುದೇ ಬಂಡಾಯ ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು ಎಂದು ಸ್ಪೀಕರ್‌ಗೆ ಸೂಚನೆ ನೀಡಿದೆ.

ಈ ಮಧ್ಯೆ ಸ್ಪೀಕರ್‌ ವಿರುದ್ಧವೇ ಕೋರ್ಟ್‌ ಮೆಟ್ಟಿಲೇರಿದ ಬಳಿಕ ಬಂಡಾಯ ಶಾಸಕರನ್ನು ವಾಪಸ್‌ ಕರೆತರುವ ಎಲ್ಲ ಯತ್ನಗಳು ಮುಗಿದಿವೆ ಎಂದು ಕಾಂಗ್ರೆಸ್‌ ಹೇಳಿದೆ.

ವಿಪ್‌ಗೆ ಈಗಿಲ್ಲ ಮಾನ್ಯತೆ
ವಿಪ್‌ ಉಲ್ಲಂಘಿಸಿದ ಮತ್ತು ಪಕ್ಷ ವಿರೋಧಿ ಚಟುವಟಿಕೆಗಾಗಿ ಸಚಿನ್‌ ಸಹಿತ 19 ಕಾಂಗ್ರೆಸ್‌ ಶಾಸಕರಿಗೆ ಅನರ್ಹತೆ ನೋಟಿಸ್‌ ಜಾರಿ ಮಾಡಲಾಗಿತ್ತು. ಆದರೆ ವಿಧಾನಸಭೆ ಅಧಿವೇಶನ ನಡೆಯುತ್ತಿರುವಾಗಲಷ್ಟೇ ವಿಪ್‌ ಅನ್ವಯವಾಗುತ್ತದೆ ಎನ್ನುವುದು ಬಂಡಾಯ ಶಾಸಕರ ವಾದ. ಹೀಗಾಗಿ ನೋಟಿಸ್‌ ವಿರುದ್ಧ ಗುರುವಾರ ಬೆಳಗ್ಗೆ ಶಾಸಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಸಂಜೆ ಅರ್ಜಿ ವಿಚಾರಣೆಗೆ ಬಂದಾಗ ತರಾತುರಿಯಲ್ಲಿ ಅರ್ಜಿ ಸಲ್ಲಿಸಿರುವ ಕಾರಣ ಕೆಲವು ಅಂಶಗಳು ಬಿಟ್ಟುಹೋಗಿದ್ದು, ಅರ್ಜಿ ತಿದ್ದುಪಡಿಗೆ ಅವಕಾಶ ಕಲ್ಪಿಸಬೇಕು ಎಂದು ಬಂಡಾಯ ಶಾಸಕರ ಪರ ವಕೀಲರು ಕೇಳಿಕೊಂಡರು. ಒಪ್ಪಿದ ನ್ಯಾಯಾಲಯವು ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

ಮತ್ತಷ್ಟು ಶಾಸಕರ ನಿರೀಕ್ಷೆ?
ಗುರುಗ್ರಾಮದ ಹೊಟೇಲ್‌ನಲ್ಲಿರುವ ಸಚಿನ್‌ ಪೈಲಟ್‌ ಬೆಂಬಲಿಗ ಶಾಸಕರು ಗುರುವಾರ ರಾತ್ರಿ ವಾಸ್ತವ್ಯ ಬದಲಿಸಿದ್ದಾರೆ. ಇನ್ನಷ್ಟು ಶಾಸಕರು ಬರಬಹುದು ಎಂಬ ನಿರೀಕ್ಷೆಯಲ್ಲಿ ಹೆಚ್ಚಿನ ಕೊಠಡಿಗಳನ್ನು ಕಾದಿರಿಸಲಾಗಿದೆ ಎನ್ನಲಾಗುತ್ತಿದೆ.

ವರವಾಗಲಿದೆಯೇ ಕರ್ನಾಟಕದ ತೀರ್ಪು?
2011ರ ಕರ್ನಾಟಕದ ಪ್ರಕರಣದಲ್ಲಿ ಸು.ಕೋ. ನೀಡಿರುವ ತೀರ್ಪು ಬಂಡಾಯ ಶಾಸಕರಿಗೆ ವರವಾಗಬಹುದು ಎನ್ನುವುದು ತಜ್ಞರ ಅಭಿಪ್ರಾಯ. ಅಂದು ಸಿಎಂ ಬಿಎಸ್‌ವೈ ವಿರುದ್ಧ ಬಂಡಾಯವೆದ್ದಿದ್ದ 11 ಬಿಜೆಪಿ ಶಾಸಕರ ಅನರ್ಹತೆಯನ್ನು ಸು.ಕೋ. ವಜಾ ಮಾಡಿತ್ತು. ಸಿಎಂ ಮೇಲೆ ವಿಶ್ವಾಸವಿಲ್ಲ ಎಂದು ಶಾಸಕರು ಅಭಿಪ್ರಾಯಪಟ್ಟದ್ದಕ್ಕಾಗಿ ಅನರ್ಹಗೊಳಿಸಲಾಗದು ಎಂದಿತ್ತು.

ರಾಜಸ್ಥಾನದಲ್ಲೂ ಪೈಲಟ್‌ ನೇತೃತ್ವದ ತಂಡವು ಬೇರೆ ಪಕ್ಷವನ್ನು ಬೆಂಬಲಿಸುವ ಅಥವಾ ಬಿಜೆಪಿಗೆ ಸೇರುವುದಾಗಿ ಹೇಳಿಲ್ಲ. ಕಳೆದ ವರ್ಷವೂ ಕಾಂಗ್ರೆಸ್‌ – ಜೆಡಿಎಸ್‌ನ 15 ಬಂಡಾಯ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳಲೇಬೇಕೆಂದು ಒತ್ತಡ ಹೇರುವಂತಿಲ್ಲ ಎಂದು ಸು. ಕೋ. ತೀರ್ಪು ನೀಡಿತ್ತು. ಈ ತೀರ್ಪು ಪರಿಗಣಿಸಿದರೆ ಪೈಲಟ್‌ ತಂಡಕ್ಕೆ ಜಯ ಸಿಗುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.