ICU ನಲ್ಲಿದ್ದ ರೋಗಿಯ ಕೈ ಕಟ್ಟಿ ಹಾಕಿ ಅತ್ಯಾಚಾರವೆಸಗಿದ ವಾರ್ಡ್ ಬಾಯ್
Team Udayavani, Mar 18, 2021, 7:10 PM IST
ನವದೆಹಲಿ:ರಾಜಸ್ಥಾನದ ಖಾಸಗಿ ಆಸ್ಪತ್ರೆಯಲ್ಲಿನ ICU ನಲ್ಲಿ ಇದ್ದ ಮಹಿಳೆಯ ಕೈಯನ್ನು ಕಟ್ಟಿ, ಆಸ್ಪತ್ರೆ ಸಿಬಂದಿಯೊಬ್ಬ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದೆ.
ಶಸ್ತ್ರ ಚಿಕಿತ್ಸೆಗೆ ಒಳಪಟ್ಟ ಮಹಿಳೆಯೊಬ್ಬಳನ್ನು ICUನಲ್ಲಿ ಇರಿಸಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಆಕೆಯ ಮುಖಕ್ಕೆ ಮಾಸ್ಕ್ ಹಾಕಲಾಗಿದ್ದು, ಆಕೆಯ ಕೈಗಳನ್ನು ಕಟ್ಟಿ ಹಾಕಲಾಗಿತ್ತು, ಘಟನೆಯ ಬಳಿಕ ಸಂತ್ರಸ್ಥೆ ಈ ವಿಚಾರವನ್ನು ಆಸ್ಪತ್ರೆಯ ಇತರ ಸಿಬಂದಿಗಳ ಬಳಿ ತಿಳಿಸಲು ಯತ್ನಿಸಿದ್ದರೂ ಆಕೆಯ ಮೇಲೆ ಬೆದರಿಕೆ ಹಾಕುವ ಮೂಲಕ ಬಾಯಿ ಮುಚ್ಚಿಸಲಾಗಿತ್ತು ಎಂದು ವರದಿಯಾಗಿದೆ.
ಮರುದಿನ ಬೆಳಿಗ್ಗೆ ತನ್ನ ಗಂಡನಲ್ಲಿ ವಿಚಾರವನ್ನು ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಬಳಿಕ ಪತಿ ಚಿತ್ರಕೂಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಮಹಿಳೆಯ ಪತಿ ತನ್ನ ಪತ್ನಿಗೆ ಅನಾರೋಗ್ಯವಿದ್ದ ಕಾರಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಬಳಿಕ ವೈದ್ಯರು ಆಕೆಗೆ ಶಸ್ತ್ರ ಚಿಕಿತ್ಸೆ ಮಾಡಿ ICUನಲ್ಲಿ ಇಟ್ಟಿದ್ದರು. ಈ ಸಮಯದಲ್ಲಿ ರೋಗಿಯ ಬಳಿ ಯಾರೂ ಇರಬಾರದು ಎಂದು ಆಸ್ಪತ್ರೆಯ ಸಿಬಂದಿ ನನ್ನನ್ನು ಹೊರಗಡೆ ಕಳುಹಿಸಿದ್ದರು. ಹಾಗಾಗಿ ನಾನು ರಾತ್ರಿ ಮನೆಗೆ ತೆರಳಿದ್ದೆ. ಬೆಳಿಗ್ಗೆ ವಾಪಸ್ ಮರಳಿದಾಗ ಪತ್ನಿ ನಡೆದ ಘಟನೆಯನ್ನು ತಿಳಿಸಿದ್ದಾಳೆ ಎಂದಿದ್ದಾರೆ.
ಇದನ್ನೂ ಓದಿ:ಕೋವಿಡ್ ಕೆಲಸ ಮಾಡುವವರಿಗೆ ಇಂದಿನಿಂದ 50 ದಿನಗಳವರೆಗೆ ರಜೆ ಇಲ್ಲ: ಸಚಿವ ಸುಧಾಕರ್
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದು, ತನಿಖೆಯ ಕುರಿತಾಗಿ ಮಾಹಿತಿ ನೀಡಿರುವ DCP ಪ್ರದೀಪ್ ಮೋಹನ್ ಶರ್ಮ ನಾವು ಈ ವಿಚಾರಕ್ಕೆ ಸಂಬಂಧಿಸಿದಂತೆ CCTV ದೃಶ್ಯಾವಳಿಗಳನ್ನು ಒಳಗೊಂಡಂತೆ ಎಲ್ಲಾ ವಿಧವಾದ ಮಾಹಿತಿಗಳನ್ನು ಕಲೆಹಾಕಿದ್ದು, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ