ಹುತಾತ್ಮ ಜವಾನ ಹರಿ ಭಾಕರ್ಗೆ ನೂರಾರು ದುಃಖತಪ್ತರ ಶ್ರದ್ಧಾಂಜಲಿ
Team Udayavani, Mar 25, 2019, 11:39 AM IST
ಜೈಪುರ : ಹುತಾತ್ಮ ಜವಾನ ಹರಿ ಭಾಕರ್ ಪಾರ್ಥಿವ ಶರೀರವನ್ನು ಇಂದು ಆತನ ಹುಟ್ಟೂರಾದ ರಾಜಸ್ಥಾನದ ನಾಗೋರ್ನ ಮಾಕ್ರಾನನಾ ಗ್ರಾಮಕ್ಕೆ ತರಲಾಯಿತು. ನೂರಾರು ಮಂದಿ ದುಃಖತಪ್ತರು ಹುತಾತ್ಮ ಭಾಕರ್ ಗೆ ಶ್ರದ್ಧಾಂಜಲಿ ಅರ್ಪಿಸಿದರು.
ಜವಾನ್ ಭಾಕರ್ ಅವರು ಕಳೆದ ಮಾರ್ಚ್ 23ರಂದು ಕಾಶ್ಮೀರದ ಪೂಂಚ್ ನಲ್ಲಿ ಪಾಕ್ ಪಡೆಗಳಿಂದ ಭಾನುವಾರ ಬೆಳಗ್ಗೆ 4 ಗಂಟೆಯ ವೇಳಗೆ ನಡೆದಿದ್ದ ಕದನ ವಿರಾಮ ಉಲ್ಲಂಘನೆಯ ವೇಳೆ ತೀವ್ರ ಗುಂಡೇಟು ಪಡೆದಿದ್ದರು. ಒಡನೆಯೇ ಅವರನ್ನು ಸಮೀಪದ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಅಲ್ಲಿ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದರು.
ಪಾಕ್ ಪಡೆಗಳು ಕಳೆದ ಶನಿವಾರ ಸಂಜೆ 5.30ರ ಸುಮಾರಿಗೆ ಪೂಂಚ್ ಜಿಲ್ಲೆಯ ಶಾಪುರ ಮತ್ತು ಕೇರ್ನಿ ಗಡಿ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘನೆಗೈದು ಆರಂಭಿಸಿದ್ದ ಗುಂಡಿನ ದಾಳಿ ರಾತ್ರಿ ಪೂರ್ತಿ ನಡೆದು ಮರುದಿನ ಭಾನುವಾರ ನಸುಕಿನ ವೇಳೆ ತನಕವೂ ಮುಂದುವರಿದಿತ್ತು ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಸೋಮವಾರ ಭಾಕರ್ ಅವರ ಅಂತ್ಯಕ್ರಿಯೆ ಅವರ ಹುಟ್ಟೂರ ಗ್ರಾಮದಲ್ಲಿ ಸಕಲ ಸೇನಾ ಗೌರವಗಳೊಂದಿಗೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ