ಟಿವಿ ಮತ್ತು ಮೊಬೈಲ್ ಗಳಿಂದಲೇ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ: ರಾಜಸ್ಥಾನ ‘ಕೈ’ ಸಚಿವ
Team Udayavani, Dec 5, 2019, 6:55 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜೈಪುರ: ಗಂಡಸರ ಲೈಂಗಿಕ ಬಯಕೆಗಳಿಗೆ ಸ್ತ್ರೀಯರು ಅಡ್ಡಿಪಡಿಸಬಾರದು ಆಗ ಮಾತ್ರ ಅತ್ಯಾಚಾರ ಸಂಬಂಧಿತ ಕೊಲೆಗಳು ನಡೆಯುವುದು ಈ ದೇಶದಲ್ಲಿ ಕಡಿಮೆಯಾಗಬಹುದು. ಮತ್ತು ವಯಸ್ಸಿಗೆ ಬಂದ ಹುಡುಗಿಯರು ಯಾವಾಗಲೂ ತಮ್ಮ ಜೊತೆಯಲ್ಲಿ ಕಾಂಡೋಮ್ ಗಳನ್ನು ಇರಿಸಿಕೊಂಡಿರಬೇಕು ಮತ್ತು ಅತ್ಯಾಚಾರಿಗಳಿಗೆ ಅವರ ಬಯಕೆ ತೀರಲು ಸಹಕರಿಸಬೇಕು ಎಂದು ಚಿತ್ರ ತಯಾರಕ ಡೇನಿಯಲ್ ಶ್ರವಣ್ ಎಂಬಾತ ವಿಕ್ಷಿಪ್ತ ಹೇಳಿಕೆ ನೀಡಿದ ಬೆನ್ನಲ್ಲೇ ಇಲ್ಲೊಬ್ಬ ಸಚಿವರು ಟಿವಿ ಮತ್ತು ಮೊಬೈಲ್ ಫೋನ್ ಗಳ ಅನ್ವೇಷಣೆಯು ಅತ್ಯಾಚಾರದಂತಹ ಅಪರಾಧಗಳನ್ನು ಹೆಚ್ಚು ಮಾಡಿದೆ ಎಂಬ ಹೇಳಿಕೆ ನೀಡಿದ್ದಾರೆ.
ರಾಜಸ್ಥಾನದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿರುವ ಭನ್ವರ್ಲಾಲ್ ಮೆಘ್ವಾಲ್ ಈ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಮೊಬೈಲ್ ಟಿವಿಗಳ ಮೂಲಕ ಇಂದಿನ ಯುವಜನತೆ ತಪ್ಪು ದಾರಿಯನ್ನು ಹಿಡಿಯುತ್ತಿದ್ದಾರೆ ಎಂದು ಮೆಘ್ವಾಲ್ ಹೇಳಿದ್ದಾರೆ.
ನ್ಯಾಯಾಲಯಗಳು ಅತ್ಯಾಚಾರ ಪ್ರಕರಣಗಳನ್ನು ಮೂರು ತಿಂಗಳೊಳಗೆ ಇತ್ಯರ್ಥಪಡಿಸಬೇಕು ಮತ್ತು ಅಪರಾಧಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದೂ ಸಹ ಸಚಿವ ಭನ್ವರ್ಲಾಲ್ ಅವರು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ಹೈದರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ನಾಲ್ವರು ಯುವಕರು ಅತ್ಯಾಚಾರ ನಡೆಸಿ ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಕೊಂದು ಆಕೆಯ ದೇಹವನ್ನು ಸುಟ್ಟುಹಾಕಿದ ಬೀಭತ್ಸ ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಈ ಸಂದರ್ಭದಲ್ಲಿ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಸಚಿವರಿಂದ ಈ ಹೇಳಿಕೆ ಹೊರಬಿದ್ದಿದೆ.
ದೇಶದಲ್ಲಿ ಅತ್ಯಾಚಾರದಂತಹ ಪ್ರಕರಣಗಳು ನಡೆದಾಗ ರಾಜಕಾರಣಿಗಳು ಮತ್ತು ಸಮಾಜದ ಪ್ರತಿಷ್ಠಿತ ವ್ಯಕ್ತಿಗಳು ತಲೆಗೊಂದರಂತೆ ತರಲೆ ಸಲಹೆಗಳನ್ನು ಮತ್ತು ಅಭಿಪ್ರಾಯಗಳನನ್ನು ನೀಡುವುದು ಹೊಸತೇನಲ್ಲ.
ಈ ಹಿಂದೆ 2012ರಲ್ಲಿ ರಾಷ್ಟ್ರರಾಜಧಾನಿಯಲ್ಲಿ ನಿರ್ಭಯಾ ಅತ್ಯಾಚಾರ ಪ್ರಕರಣ ನಡೆದಿದ್ದ ಸಂದರ್ಭದಲ್ಲಿ ಹರ್ಯಾಣದ ಖಾಪ್ ನಾಯಕರೊಬ್ಬರು ಚೈನೀಸ್ ಫಾಸ್ಟ್ ಫುಡ್ ಗಳಿಂದಲೇ ಅತ್ಯಾಚಾರದಂತಹ ಘಟನೆಗಳು ನಡೆಯುತ್ತವೆ ಎಂದು ಹೇಳಿಕೆ ನೀಡಿದ್ದರು. ಇನ್ನು 2015ರಲ್ಲಿ ಒಂದು ಹೇಳಿಕೆ ನೀಡಿದ್ದ ಬಿಹಾರದ ಅಂದಿನ ಸಚಿವರೊಬ್ಬರು ಮೊಬೈಲ್ ಫೋನ್ ಗಳು ಹಾಗೂ ಮಾಂಸಾಹಾರ ಸೇವನೆ ಅತ್ಯಾಚಾರಕ್ಕೆ ಪ್ರೇರಣೆ ಎಂದು ಹೇಳಿದ್ದು ಆ ಸಂದರ್ಭದಲ್ಲಿ ಭಾರೀ ವಿವಾದವನ್ನು ಸೃಷ್ಟಿಸಿತ್ತು.
ಇನ್ನು 2014ರಲ್ಲಿ ಅಂದಿನ ಮಧ್ಯಪ್ರದೇಶದ ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಬಾಬುಲಾಲ್ ಗೌರ್ ಅವರು ಅತ್ಯಾಚಾರದಂತಹ ಅಪರಾಧ ಪ್ರಕರಣಗಳಲ್ಲಿ ಹೆಚ್ಚಳವಾಗಲು ಬಾಲಿವುಡ್ ಸಿನೇಮಾಗಳೇ ಪ್ರೇರಣೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು ಮಾತ್ರವಲ್ಲದೇ ಮಹಿಳೆಯರ ಒಪ್ಪಿಗೆಯ ಮೇಲೆಯೇ ಅವರನ್ನು ಅತ್ಯಾಚಾರ ಮಾಡಲಾಗುತ್ತದೆ ಎಂಬರ್ಥದ ಹೆಳಿಕೆಯನ್ನೂ ಗೌರ್ ನೀಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಮಹಿಳೆಯರು ಜೀನ್ಸ್ ಪ್ಯಾಂಟ್ ತೊಡುವುದೇ ಅತ್ಯಾಚರಕ್ಕೆ ಕಾರಣ ಎಂಬ ಹೇಳಿಕೆಯನ್ನು ಇದೇ ಬಾಬುಲಾಲ್ ಗೌರ್ 2013ರಲ್ಲಿ ನೀಡಿದ್ದರು.
ಒಟ್ಟಿನಲ್ಲಿ ಅತ್ಯಾಚಾರದಂತಹ ಗಂಭೀರ ಪ್ರಕರಣಗಳು ನಡೆದ ಬಳಿಕ ಜನ ಸಾಮಾನ್ಯರಲ್ಲಿ ತಮ್ಮ ಭದ್ರತೆಯ ಕುರಿತಾಗಿ ಹಲವು ಪ್ರಶ್ನೆಗಳು ಮೂಡಿದರೆ ರಾಜಕಾರಣಿಗಳು ಮತ್ತು ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನಗಳಲ್ಲಿರುವ ಕೆಲವು ವ್ಯಕ್ತಿಗಳು ಮಾತ್ರ ಸಂವೇದನಾರಹಿತ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಕ್ಕೀಡಾಗುತ್ತಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ