ರಾಜಸ್ಥಾನ: ಅಶೋಕ್ ಗೆಹ್ಲೋಟ್ ಅಧಿವೇಶನ ತಂತ್ರ
Team Udayavani, Jul 20, 2020, 5:59 AM IST
ಜೈಪುರ: ರಾಜಸ್ಥಾನ ರಾಜಕೀಯ ಪ್ರಮುಖ ಘಟ್ಟ ತಲುಪಿದ್ದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕುರ್ಚಿ ಉಳಿಸಿಕೊಳ್ಳಲು ‘ಪ್ಲಾನ್ ಬಿ’ ತಂತ್ರದ ಮೊರೆ ಹೊಕ್ಕಿದ್ದಾರೆ.
ಬಂಡಾಯ ನಾಯಕ ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗ ಶಾಸಕರು ಹೈಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿ ಕುರಿತಾಗಿ ಮಂಗಳವಾರ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಕೋರ್ಟ್ನಲ್ಲೇನಾದರೂ ಸಚಿನ್ ಪೈಲಟ್ ಗುಂಪಿಗೆ ಜಯ ಸಿಕ್ಕಿದರೆ, ಪ್ರತಿಯಾಗಿ ಏನು ಮಾಡಬೇಕು ಎಂಬ ಬಗ್ಗೆ ಚಿಂತನೆ ಶುರುವಾಗಿವೆ.
ಅಶೋಕ್ ಗೆಹ್ಲೋಟ್ ಈ ವಾರವೇ ವಿಧಾನಸಭೆ ಅಧಿವೇಶನ ಕರೆಯಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರ್ವಭಾವಿಯಾಗಿ ಅವರು ಶನಿವಾರ ಸಂಜೆ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರನ್ನು ಭೇಟಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಸದ್ಯ ಅಧಿವೇಶನ ನಡೆಯದಿರುವುದರಿಂದ ವಿಪ್ ಅನ್ವಯವಾಗುವುದಿಲ್ಲ ಎಂಬುದು ಸಚಿನ್ ಪೈಲಟ್ ಗುಂಪಿನ ವಾದ. ಹೀಗಾಗಿಯೇ ಕೋರ್ಟ್ನಲ್ಲಿ ಅವರ ಪರ ತೀರ್ಪು ಬಂದರೂ ಈ ವಾರವೇ ಅಧಿವೇಶನ ಕರೆದು ಪೈಲಟ್ ಗುಂಪು ಪಾಲ್ಗೊಳ್ಳಬೇಕಾದ ಅನಿವಾರ್ಯತೆ ಉಂಟುಮಾಡುವ ಯೋಜನೆ ರೂಪಿಸಲಾಗುತ್ತಿದೆ. ಒಂದು ವೇಳೆ ಅಧಿವೇಶನಕ್ಕೆ ಗೈರಾದರೆ ಅವರ ಅನರ್ಹತೆ ಸುಲಭವಾಗಲಿದೆ ಎಂಬುದು ಲೆಕ್ಕಾಚಾರ.
ಗೆಹ್ಲೋಟ್ ಮೇಲೆ ನಂಬಿಕೆ
ಸದ್ಯ ಕಾಂಗ್ರೆಸ್ ಹೈಕಮಾಂಡ್ ಸಿಎಂ ಗೆಹ್ಲೋಟ್ ಮೇಲೆ ನಂಬಿಕೆ ಇರಿಸಿದೆ. ಶನಿವಾರ ಬಿಟಿಪಿಯ ಇಬ್ಬರು ಶಾಸಕರು ಸರಕಾರಕ್ಕೆ ಬೆಂಬಲ ಘೋಷಿಸಿದ ಮೇಲೆ ಗೆಹ್ಲೋಟ್ ಕೂಡ ನಿರಾಳವಾಗಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಅಧಿವೇಶನ ಕರೆಯಲು ಮುಂದಾಗಿರಬಹುದು ಎನ್ನಲಾಗುತ್ತಿದೆ.
ಬೆಂಗಳೂರಿಗೆ ಹೋಗಿಲ್ಲ
ನಾವ್ಯಾರೂ ಬೆಂಗಳೂರಿಗೆ ಹೋಗಿಲ್ಲ ಎಂದು ಸಚಿನ್ ಪೈಲಟ್ ಗುಂಪಿನ ಹಿರಿಯ ಶಾಸಕರೊಬ್ಬರು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳ ವರದಿ ಸುಳ್ಳು ಎಂದು ಹೇಳಿದ್ದಾರೆ. ಆದರೆ ಇರುವ ಸ್ಥಳದ ಬಗ್ಗೆ ಮಾತ್ರ ಅವರು ಗುಟ್ಟು ಬಿಟ್ಟುಕೊಟ್ಟಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್