ಕನ್ಯತ್ವ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಅತ್ಯಾಚಾರ ಸಂತ್ರಸ್ತೆಗೆ ಚಿತ್ರಹಿಂಸೆ!
10 ಲಕ್ಷ ರೂ. ದಂಡ ಪಾವತಿಸುವಂತೆಯೂ ಖಾಪ್ ಪಂಚಾಯತ್ನಿಂದ ಆದೇಶ
Team Udayavani, Sep 6, 2022, 7:40 AM IST
ಜೈಪುರ: ರಾಜಸ್ಥಾನದಲ್ಲೊಂದು ರಾಕ್ಷಸೀಯ ಕೃತ್ಯ ನಡೆದಿದೆ. ಅತ್ಯಾಚಾರ ಸಂತ್ರಸ್ತೆಯಾದ 24 ವರ್ಷದ ವಧುವಿನ ಮೇಲೆ ಪತಿಯ ಕುಟುಂಬ ಸದಸ್ಯರು ಹಲ್ಲೆ ನಡೆಸಿ, ಚಿತ್ರಹಿಂಸೆ ನೀಡಿದ್ದಲ್ಲದೆ, ಒತ್ತಾಯಪೂರ್ವಕವಾಗಿ ಆಕೆಯ “ಕನ್ಯತ್ವ ಪರೀಕ್ಷೆ’ ನಡೆಸಿದ್ದಾರೆ. ಅಷ್ಟೇ ಅಲ್ಲ, “ಕನ್ಯತ್ವ’ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಆಕೆಯ ಮೇಲೆಯೇ ಅಲ್ಲಿನ ಖಾಪ್ ಪಂಚಾಯತ್ 10 ಲಕ್ಷ ರೂ.ಗಳ ದಂಡ ವಿಧಿಸಿದೆ.
ಈ ಅಮಾನವೀಯ ಘಟನೆ ನಡೆದಿರುವುದು ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ. ಸಂತ್ರಸ್ತೆಯು ಸಾನ್ಸಿ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದವಳು. ಇಲ್ಲಿ ಕನ್ಯತ್ವ ಪರೀಕ್ಷೆ ನಡೆಸುವ ಕುಕಾಡಿ ಪ್ರಾಥ ಎಂಬ ಪದ್ಧತಿ ಜಾರಿಯಲ್ಲಿದೆ. ಅದರಂತೆ, ಯುವತಿಯು ಈ ಪರೀಕ್ಷೆಯಲ್ಲಿ ಫೇಲ್ ಆದರೆ, ಆಕೆಯ ಕುಟುಂಬವು ವರನ ಮನೆಯವರಿಗೆ 10 ಲಕ್ಷ ರೂ. ದಂಡ ಪಾವತಿಸಬೇಕು!
ಈ ಹಿಂದೆ ಆ ಯುವತಿಯ ನೆರೆಮನೆಯಾತನೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಪೊಲೀಸರಿಗೆ ದೂರನ್ನೂ ನೀಡಲಾಗಿತ್ತು. ಪ್ರಸಕ್ತ ವರ್ಷದ ಮೇ 11ರಂದು ಅವಳನ್ನು ಮದುವೆ ಮಾಡಿ ಕೊಡಲಾಗಿತ್ತು. ಆದರೆ, ಆಕೆಯ ಪತಿಯ ಅಪ್ಪ ಹೆಡ್ ಕಾನ್ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರಣ, ಅವರಿಗೆ ಈ ಅತ್ಯಾಚಾರದ ಬಗ್ಗೆ ಮಾಹಿತಿಯಿತ್ತು. ಹೀಗಿದ್ದರೂ, ಆಕೆಗೆ ಚಿತ್ರಹಿಂಸೆ ನೀಡಿ ಕನ್ಯತ್ವ ಪರೀಕ್ಷೆ ಮಾಡಿಸಿ ಗ್ರಾಮಸ್ಥರೆದುರು ಅವಮಾನ ಮಾಡಿದ್ದಾರೆ. ಜತೆಗೆ, ಖಾಪ್ ಪಂಚಾಯತ್ ಕೂಡ ದಂಡ ಪಾವತಿಸುವಂತೆ ಯುವತಿಯ ಕುಟುಂಬಕ್ಕೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ