BJP, BJP…ಪಾಲಿಕೆ, ಪಂಚಾಯ್ತಿ ಚುನಾವಣೆ ಫಲಿತಾಂಶದ ಬಗ್ಗೆ ಜಾವ್ಡೇಕರ್ ಹೇಳಿದ್ದೇನು?
ಕಾಂಗ್ರೆಸ್ ಆಡಳಿತದ ರಾಜಸ್ಥಾನದಲ್ಲಿ ಬಿಜೆಪಿ 21 ಜಿಲ್ಲಾ ಪರಿಷತ್ ಗಳಲ್ಲಿ 14ರಲ್ಲಿ ಗೆಲುವು ಸಾಧಿಸಿದೆ.
Team Udayavani, Dec 9, 2020, 4:59 PM IST
ನವದೆಹಲಿ:ರಾಜಸ್ಥಾನದ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಭರ್ಜರಿ ಗೆಲುವು ಸಾಧಿಸಿದೆ. ತೆಲಂಗಾಣದ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಅರುಣಾಚಲದ ಗ್ರಾಮ ಪಂಚಾಯ್ತಿ ಚುನಾವಣೆಗಳಲ್ಲಿ ಜನರು ಬಿಜೆಪಿಯನ್ನು ಬೆಂಬಲಿಸಿದ್ದು, ಈ ಹಿನ್ನೆಲೆಯಲ್ಲಿ ನೂತನ ಕೃಷಿ ಸುಧಾರಣಾ ಕಾಯ್ದೆಗೆ ಬೆಂಬಲ ಇದೆ ಎಂದು ಸೂಚಿಸಿದಂತಾಗಿದೆ ಎಂಬುದಾಗಿ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಬುಧವಾರ(ಡಿಸೆಂಬರ್ 09, 2020) ತಿಳಿಸಿದ್ದಾರೆ.
ಕೋವಿಡ್ ಸೋಂಕು, ಜಾಗತಿಕ ಆರ್ಥಿಕ ಸಂಕಷ್ಟ ಒಂದೆಡೆಯಾದರೆ, ವಿರೋಧಪಕ್ಷಗಳು ಕೃಷಿ ಸುಧಾರಣಾ ಕಾಯ್ದೆಗಳನ್ನು ವಿರೋಧಿಸುವುದೇ ಮುಖ್ಯ ಅಜೆಂಡಾ ಮಾಡಿಕೊಂಡಿದ್ದಾರೆ. ಆದರೆ ದೇಶದ ಮೂಲೆ, ಮೂಲೆಯಲ್ಲೂ ಜನರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಮಾಧ್ಯಮವನ್ನು ಉದ್ದೇಶಿಸಿ ಮಾತನಾಡುತ್ತ ಜಾವ್ಡೇಕರ್ ಹೇಳಿದರು.
ಕಾಂಗ್ರೆಸ್ ಆಡಳಿತದ ರಾಜಸ್ಥಾನದಲ್ಲಿ ಬಿಜೆಪಿ 21 ಜಿಲ್ಲಾ ಪರಿಷತ್ ಗಳಲ್ಲಿ 14ರಲ್ಲಿ ಗೆಲುವು ಸಾಧಿಸಿದೆ. ಚುನಾವಣಾ ಫಲಿತಾಂಶ ಬಿಜಪಿಯನ್ನು ಜನರು ಬೆಂಬಲಿಸಿದ್ದನ್ನು ಬಹಿರಂಗಪಡಿಸಿದೆ. ಗ್ರಾಮೀಣ ಪ್ರದೇಶದ ಜನರು ಕೂಡಾ ಬಿಜೆಪಿಗೆ ಭರ್ಜರಿ ಬಹುಮತ ನೀಡಿ ಗೆಲ್ಲಿಸಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:ಟಿ20 ರ್ಯಾಂಕಿಂಗ್ ಪ್ರಕಟ: ಟಾಪ್ ಟೆನ್ ನಲ್ಲಿ ಸ್ಥಾನಪಡೆದ ಕೊಹ್ಲಿ, ರಾಹುಲ್
ಗೆಲುವಿನ ಮತದ ಪ್ರಮಾಣ ಕೂಡಾ ಹೆಚ್ಚಳವಾಗಿದೆ. ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ಟೋಂಕಾ ಪ್ರದೇಶದ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ನಾಲ್ಕು ಸಚಿವರು ಇರುವ ಪ್ರದೇಶಗಳಲ್ಲಿಯೂ ಜಿಲ್ಲಾ ಪರಿಷತ್ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಗೆ ಸಾಧ್ಯವಾಗಿಲ್ಲ. ಅಂದರೆ ದೇಶಾದ್ಯಂತ ಜನರು ಬಿಜೆಪಿಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದರ ಸೂಚನೆಯಾಗಿದೆ ಎಂದು ಜಾವ್ಡೇಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ