OBC ಮೀಸಲಾತಿ ಏರಿಕೆಗೆ ಮುಂದಾದ ರಾಜಸ್ಥಾನ
-ಒಬಿಸಿಗೆ ಶೇ.6ರಷ್ಟು ಮೀಸಲು ಏರಿಕೆ, ಜಾತಿವಾರು ಗಣತಿಗೆ ಸರ್ಕಾರ ಬದ್ಧ: ಗೆಹ್ಲೋಟ್
Team Udayavani, Aug 11, 2023, 5:15 AM IST
ಜೈಪುರ: “ಜಾತಿವಾರು ಗಣತಿ ಕೈಗೊಳ್ಳಲು ರಾಜಸ್ಥಾನ ಸರ್ಕಾರ ಸಿದ್ಧವಿದೆ. ಅಲ್ಲದೇ ಒಬಿಸಿ ಮೀಸಲಾತಿಯನ್ನು ಶೇ.6ರಷ್ಟು ಏರಿಕೆ ಮಾಡಲು ಸರ್ಕಾರ ಬದ್ಧವಾಗಿದೆ’ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಪ್ರಸ್ತುತ ರಾಜಸ್ಥಾನದಲ್ಲಿ ಒಬಿಸಿಗೆ ಶೇ.21ರಷ್ಟು ಮೀಸಲಾತಿ ಇದೆ. ಒಂದು ವೇಳೆ ಸರ್ಕಾರ ಮೀಸಲಾತಿಯನ್ನು ಶೇ.6ರಷ್ಟು ಏರಿಕೆ ಮಾಡಿದರೆ, ಒಬಿಸಿಗೆ ಶೇ.27ರಷ್ಟು ಮೀಸಲಾತಿ ಸಿಗಲಿದೆ. ರಾಜಸ್ಥಾನದ ಜನಸಂಖ್ಯೆಯ ಶೇ.50ಕ್ಕೂ ಹೆಚ್ಚು ಮಂದಿ ಒಬಿಸಿ ವರ್ಗಕ್ಕೆ ಸೇರುತ್ತಾರೆ.
ವಿಶ್ವ ಬುಡಕಟ್ಟು ದಿನದ ಅಂಗವಾಗಿ ಬನ್ಸಾವಾರದಲ್ಲಿ ಗುರುವಾರ ಆಯೋಜಿಸಿದ್ದ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸಮಾಜದಲ್ಲಿ ಹಿಂದುಳಿದವರನ್ನು ಮೇಲೆತ್ತುವ ನಿಟ್ಟಿನಲ್ಲಿ ಜಾತಿವಾರು ಗಣತಿ ಸಹಕಾರಿಯಾಗಿದೆ. ಇದರ ಪರವಾಗಿ ರಾಜ್ಯ ಸರ್ಕಾರವಿದೆ’ ಎಂದು ಹೇಳಿದರು. ಈ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಭಾಗವಹಿಸಿದ್ದರು.
ಪ್ರಸ್ತುತ ರಾಜಸ್ಥಾನದಲ್ಲಿ ಒಬಿಸಿಗೆ ಶೇ.21, ಎಸ್ಸಿಗೆ ಶೇ.16, ಎಸ್ಟಿಗೆ ಶೇ.10, ಆಥಿಕವಾಗಿ ಹಿಂದುಳಿದ ವರ್ಗ(ಇಡಬ್ಲೂéಎಸ್)ಕ್ಕೆ ಶೇ.10 ಹಾಗೂ ಅತ್ಯಂತ ಹಿಂದುಳಿದ ವರ್ಗ(ಎಂಬಿಸಿ)ಕ್ಕೆ ಶೇ.5ರಷ್ಟು ಮೀಸಲಾತಿ ಇದ್ದು, ಒಟ್ಟಾರೆ ಶೇ.64ರಷ್ಟು ಮೀಸಲಾತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ