ಪತಿ ಜೊತೆ ಜಗಳವಾಡಿ ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ: ಬದುಕುಳಿದ ತಾಯಿ, ಮಕ್ಕಳು ಮೃತ್ಯು
Team Udayavani, Jun 13, 2023, 4:48 PM IST
ಜೈಪುರ: ಗಂಡನೊಂದಿಗೆ ಜಗಳವಾಡಿ ಮಕ್ಕಳೊಂದಿಗೆ ತಾಯಿಯೊಬ್ಬಳು ಕೆರೆಗೆ ಹಾರಿದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ.
ಸೋಹ್ನಿ ಬಿಷ್ಣೋಯಿ (23) ತನ್ನ ಗಂಡನೊಂದಿಗೆ ಕಳೆದ ರಾತ್ರಿ ಜಗಳವಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಗೊಂಡಿದೆ.
ಇದೇ ಕಾರಣದಿಂದ ಸೋಹ್ನಿ ಬಿಷ್ಣೋಯಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಿ ಮನೆ ಪಕ್ಕದ ಕೆರೆಗೆ ಹೋಗಿ ಹಾರಿದ್ದಾಳೆ. ಘಟನೆಯಲ್ಲಿ ಮಕ್ಕಳಾದ ಸಮೀಕ್ಷಾ (3) ಮತ್ತು ಆಕೆಯ ಸಹೋದರ ಅನುಭವ್ ಮೃತಪಟ್ಟಿದ್ದಾರೆ. ಮಕ್ಕಳನ್ನು ಕರೆದುಕೊಂಡು ತಾಯಿ ಬದುಕಿ ಉಳಿದಿದ್ದಾರೆ ಎಂದು ಸಬ್ ಇನ್ಸ್ಪೆಕ್ಟರ್ ಭಗವಾನ್ ಸಿಂಗ್ ಹೇಳಿದ್ದಾರೆ.
ಸೋಹ್ನಿ ಬಿಷ್ಣೋಯ್ ಹೇಳಿಕೆ ಹಾಗೂ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪತಿ ವಿರುದ್ಧ ಹಲ್ಲೆ ಹಾಗೂ ಕಿರುಕುಳ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!