ಭಗವಾನ್ ವಿಷ್ಣುವನ್ನೇ ಮದುವೆಯಾದ 30 ವರ್ಷದ ಯುವತಿ ; ವೈರಲ್ ಸುದ್ದಿ
ದೇವರನ್ನೇ ಶಾಸ್ತ್ರೋಕ್ತವಾಗಿ ಮದುವೆಯಾಗಲು ಕಾರಣವಾದದ್ದಾದರೂ ಏನು?
Team Udayavani, Dec 16, 2022, 8:10 PM IST
ಜೈಪುರ: ರಾಜಸ್ಥಾನದ ಗೋವಿಂದಗಢ ಸಮೀಪದ ಹಳ್ಳಿಯೊಂದರಲ್ಲಿ ನಡೆದ ಮದುವೆಯೊಂದು ವಿಲಕ್ಷಣ ಕಾರಣಕ್ಕೆ ಸುದ್ದಿಯಾಗುತ್ತಿದೆ. ಮದುವೆಯ ಸಮಯದಲ್ಲಿ ಗಣೇಶ ಪೂಜೆಯಿಂದ ಹಿಡಿದು ಎಲ್ಲಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಈ ಮದುವೆಯಲ್ಲಿ ವರ ಹೊರತುಪಡಿಸಿ ಎಲ್ಲರೂ ಹಾಜರಿದ್ದರು.
ಜೈಪುರದ 30 ವರ್ಷದ ಪೂಜಾ ಸಿಂಗ್ ಭಗವಾನ್ ವಿಷ್ಣುವನ್ನು ಮದುವೆಯಾದ ವಿಚಾರ ಎಲ್ಲೆಡೆ ಚರ್ಚೆಯ ವಿಷಯವಾಗಿದೆ. ಮದುವೆಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಪೂಜಾ ಸಿಂಗ್ ಅವರು ಡಿಸೆಂಬರ್ 8 ರಂದು ಸಂಪೂರ್ಣ ವಿಧಿವಿಧಾನಗಳೊಂದಿಗೆ ವಿಷ್ಣು ದೇವರನ್ನೇ ಮದುವೆಯಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಈ ವಿಶಿಷ್ಟ ಮದುವೆಯಲ್ಲಿ, ಪೂಜಾ ಸ್ವತಃ ವಿಷ್ಣುವಿನ ಹೆಸರಿನಲ್ಲಿ ಸಿಂಧೂರದ ಬದಲಿಗೆ ಶ್ರೀಗಂಧವನ್ನು ಹಚ್ಚಿಕೊಂಡರು.
ಭಗವಾನ್ ವಿಷ್ಣುವನ್ನು ಮದುವೆಯಾಗಲು ಕಾರಣವೇನು ಎಂದು ಕೇಳಿದಾಗ ಪೂಜಾ, ನಾನು ಮದುವೆಯಾಗುವುದಿಲ್ಲ ಎಂದು ಭಾವಿಸಿದ್ದೆ, ಆದರೆ ಜನರ ಮೂದಲಿಕೆಗಳನ್ನು ಕೇಳಿ ಬೇಸರಗೊಂಡೆ. ಜನರು ತಮ್ಮ ಮದುವೆಯ ಬಗ್ಗೆ ಮಾತನಾಡುವುದನ್ನು ನಿಲ್ಲಿಸಲು ದೇವಸ್ಥಾನದಲ್ಲಿ ಕುಳಿತು ಮದುವೆಯಾಗಿದ್ದೇನೆ ಎಂದು ಹೇಳಿದ್ದಾರೆ.
ಬಾಲ್ಯದಿಂದಲೂ ತಂದೆ-ತಾಯಿಯ ನಡುವೆ ಜಗಳಗಳು ನಡೆಯುತ್ತಿದ್ದ ಕಾರಣ ತಾನು ಮದುವೆಯಾಗುವುದಿಲ್ಲ ಎಂದು ನಿರ್ಧರಿಸಿದ್ದೆ. ತನ್ನ ಜೀವನವನ್ನು ಹಾಳು ಮಾಡಿಕೊಳ್ಳಲು ಬಯಸಲಿಲ್ಲ ಎಂದು ಪೂಜಾ ಹೇಳಿದ್ದಾರೆ.
ಮದುವೆಯಾದ ನಂತರ, ಪೂಜಾ ತನ್ನ ಮನೆಯಲ್ಲಿ ದೇವರ ಕೋಣೆಯಲ್ಲಿ ಕುಳಿತು ಭಗವಾನ್ ವಿಷ್ಣುವಿಗೆ ಆಹಾರವನ್ನು ತಯಾರಿಸುತ್ತಾಳೆ. ಸಮಾಜ ತನ್ನನ್ನು ಗೇಲಿ ಮಾಡುತ್ತದೆ, ಆದರೆ ವಿಷ್ಣುವನ್ನು ಪತಿಯಾಗಿ ಸ್ವೀಕರಿಸಿದ್ದೇನೆ ಎಂದು ಪೂಜಾ ಹೇಳಿದ್ದಾರೆ. ಸಮಾಜದ ಅನೇಕ ಜನರು ಪೂಜಾ ಅವರನ್ನು ಬೆಂಬಲಿಸಿದ್ದಾರೆ.ಹಲವರು ಸುದ್ದಿ ಕೇಳಿ ನಗೆಯಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ