ಗೇಮ್ ಚೇಂಜರ್! ಕೊನೆಗೂ ರಾಜಕೀಯ ಪ್ರವೇಶ…ಜನವರಿಯಲ್ಲಿ ರಜನಿಕಾಂತ್ ಪಕ್ಷ ಸ್ಥಾಪನೆ

ರಾಜಕೀಯ ಕ್ಷೇತ್ರ ಜನರ ಏಳಿಗೆಗಾಗಿ ಇರುವ ಕಾರ್ಯಕ್ಷೇತ್ರವಾಗಿದೆ.

Team Udayavani, Dec 3, 2020, 1:10 PM IST

ಗೇಮ್ ಚೇಂಜರ್! ಕೊನೆಗೂ ರಾಜಕೀಯ ಪ್ರವೇಶ…ಜನವರಿಗೆ ರಜನಿಕಾಂತ್ ಪಕ್ಷ ಸ್ಥಾಪನೆ

ಚೆನ್ನೈ: ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಕುರಿತ ಊಹಾಪೋಹಕ್ಕೆ ಗುರುವಾರ(ಡಿಸೆಂಬರ್ 03, 2020) ತೆರೆಬಿದ್ದಿದ್ದು, 2021ರ ಜನವರಿಯಲ್ಲಿ ರಾಜಕೀಯ ಪಕ್ಷಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದು, ಈ ಬಗ್ಗೆ ಡಿಸೆಂಬರ್ 31(2020)ರಂದು ಘೋಷಿಸುವುದಾಗಿ ರಜನಿಕಾಂತ್ ಸ್ಪಷ್ಟಪಡಿಸಿದ್ದಾರೆ.

ತಮಿಳುನಾಡು ರಾಜ್ಯರಾಜಕಾರಣಕ್ಕೆ ತಾನು ಪ್ರವೇಶಿಸುವುದಾಗಿ ರಜನಿಕಾಂತ್ ಅವರು 2017ರ ಡಿಸೆಂಬರ್ 31ರಂದು ಘೋಷಿಸಿದ್ದರು. ಆದರೆ ಹಲವಾರು ಕಾರಣಗಳಿಂದ ರಾಜಕೀಯ ಪಕ್ಷ ಸ್ಥಾಪನೆಯನ್ನು ಮುಂದೂಡತ್ತಲೇ ಬಂದಿದ್ದರು.

ಏತನ್ಮಧ್ಯೆ ಅನಾರೋಗ್ಯದ ಹಿನ್ನೆಲೆಯಲ್ಲಿ ರಜನಿಕಾಂತ್ ರಾಜಕೀಯ ಪ್ರವೇಶದಿಂದ ಹಿಂದೆ ಸರಿದಿರುವುದಾಗಿ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವುದಾಗಿಯೂ ರಜನಿಕಾಂತ್ ಇತ್ತೀಚೆಗೆ ಸ್ಪಷ್ಟಪಡಿಸಿದ್ದರು. ಆದರೆ ಇದೀಗ ಅಧಿಕೃತವಾಗಿ ರಾಜಕೀಯ ಪ್ರವೇಶದ ಬಗ್ಗೆ ಸ್ಪಷ್ಟಪಡಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದಾರೆ ಎಂದು ವರದಿ ತಿಳಿಸಿದೆ.

ಸೋಮವಾರ “ರಜನಿ ಮಕ್ಕಳ್ ಮಂಡ್ರಂ”ನ ಜಿಲ್ಲಾ ಕಾರ್ಯದರ್ಶಿಗಳ ಜತೆ ಚರ್ಚೆ ನಡೆಸಿದ್ದ ರಜನಿಕಾಂತ್ ಅವರು, ತಾನು ರಾಜಕೀಯ ಪಕ್ಷ ಸ್ಥಾಪಿಸುತ್ತಿರುವ ಬಗ್ಗೆ ಡಿಸೆಂಬರ್ 31ರಂದು ಘೋಷಿಸುವುದಾಗಿ ತಿಳಿಸಿದ್ದರು.

“ರಾಜಕೀಯವೆಂಬುದು ಆಧ್ಯಾತ್ಮಿಕದ ಭಾಗ ಅದು ಜಾತಿ, ಭ್ರಷ್ಟಾಚಾರನ್ನು ಮೀರಿದ್ದು ಅಲ್ಲದೇ ರಾಜಕೀಯ ಕ್ಷೇತ್ರ ಜನರ ಏಳಿಗೆಗಾಗಿ ಇರುವ ಕಾರ್ಯಕ್ಷೇತ್ರವಾಗಿದೆ. ತಾನು ಯಾವ ಉದ್ದೇಶದಿಂದ ರಾಜಕೀಯ ಪ್ರವೇಶಿಸುತ್ತಿದ್ದೇನೆ ಎಂಬುದನ್ನು ತಮಿಳುನಾಡಿನ ಪ್ರತಿಯೊಂದು ಮೂಲೆ, ಮೂಲೆಗೂ ಸಂದೇಶವನ್ನು ತಲುಪಿಸುವಂತೆ ರಜನಿಕಾಂತ್ ತಮ್ಮ ಅಭಿಮಾನಿಗಳಲ್ಲಿ, ಬೆಂಬಲಿಗರಲ್ಲಿ ಮನವಿ ಮಾಡಿಕೊಂಡಿರುವುದಾಗಿ” ವರದಿ ವಿವರಿಸಿದೆ.

1996ರಲ್ಲಿ ರಜನಿಕಾಂತ್ ಅವರು ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡನ್ನು ಜಯಲಲಿತಾರಿಂದ ರಕ್ಷಿಸುವ ನಿಟ್ಟಿನಲ್ಲಿ ಡಿಎಂಕೆಯನ್ನು ಬಹಿರಂಗವಾಗಿಯೇ ಬೆಂಬಲಿಸಿದ್ದರು. ಈ ಚುನಾವಣೆಯಲ್ಲಿ ಜಯಾ ನೇತೃತ್ವದ ಎಐಎಡಿಎಂಕೆ ಸೋತು ಅಧಿಕಾರ ಕಳೆದುಕೊಂಡಿತ್ತು. ಇದರಿಂದಾಗಿ ರಜನಿಕಾಂತ್ ತಮಿಳುನಾಡು ರಾಜಕೀಯದಲ್ಲಿ ಗೇಮ್ ಚೇಂಜರ್ ಎಂದೇ ಪರಿಗಣಿಸಲಾಗಿತ್ತು. ಅಲ್ಲದೇ ರಜನಿಕಾಂತ್ ಕೂಡಾ ರಾಜಕೀಯ ಪ್ರವೇಶಿಸಲು ಸುಗಮ ಹಾದಿ ಕಲ್ಪಿಸಿಕೊಟ್ಟಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಯಲಲಿತಾ ಅವರ ನಿಧನದ ಒಂದು ವರ್ಷದ ಬಳಿಕ ರಾಜಕೀಯ ಪ್ರವೇಶಿಸುವ ಬಗ್ಗೆ ರಜನಿಕಾಂತ್ ಅಧಿಕೃತವಾಗಿ ಘೋಷಿಸಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.