ರಾಜೀವ್ ಗಾಂಧಿ ಹತ್ಯೆ ಆರೋಪಿ ಪೇರರಿವಾಲನ್ಗೆ ಜಾಮೀನು
Team Udayavani, Mar 10, 2022, 7:50 AM IST
ನವದೆಹಲಿ: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಎ.ಜಿ.ಪೇರರಿವಾಲನ್ಗೆ ಸುಪ್ರೀಂಕೋರ್ಟ್ ಬುಧವಾರ ಜಾಮೀನು ನೀಡಿದೆ.
ಮೂವತ್ತು ವರ್ಷಗಳಿಂದ ಆತ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವುದನ್ನು ಗಮನಿಸಿಕೊಂಡು ನ್ಯಾ.ಎಲ್.ನಾಗೇಶ್ವರ ರಾವ್ ಮತ್ತು ನ್ಯಾ.ಬಿ.ಆರ್.ಗವಾಯ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. 2014ರಲ್ಲಿ ಆತನಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಾಡು ಮಾಡಲಾಗಿತ್ತು.
ಜಾಮೀನು ಪಡೆದುಕೊಂಡ ಬಳಿಕ ತಮಿಳುನಾಡು ರಾಜಧಾನಿ ಚೆನ್ನೈ ಸಮೀಪದ ಪೊಲೀಸ್ ಠಾಣೆಗೆ ಪ್ರತಿ ತಿಂಗಳ ಮೊದಲ ವಾರದಲ್ಲಿ ವರದಿ ಮಾಡಿಕೊಳ್ಳಬೇಕು. ಆತನ ಬಿಡುಗಡೆಗೆ ಸಂಬಂಧಿಸಿದಂತೆ ಸ್ಥಳೀಯ ಕೋರ್ಟ್ ಅಗತ್ಯ ಬಿದ್ದರೆ ಹೆಚ್ಚುವರಿ ನಿಯಮಗಳನ್ನು ವಿಧಿಸಲೂ ಅವಕಾಶ ಇದೆ ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಕೇಂದ್ರ ಸರ್ಕಾರದ ಪರವಾಗಿ ವಾದಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಜಾಮೀನು ನೀಡುವುದಕ್ಕೆ ಪ್ರಬಲವಾಗಿ ವಿರೋಧಿಸಿದರು. ಇದರ ಹೊರತಾಗಿಯೂ ಜಾಮೀನು ನೀಡುವುದಾಗಿ ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ