ರಕ್ಷಣಾ ಸಚಿವರಾಗಿ ರಾಜನಾಥ್ ಪದಗ್ರಹಣ
Team Udayavani, Jun 2, 2019, 6:00 AM IST
ಹೊಸದಿಲ್ಲಿ: ರಕ್ಷಣಾ ಸಚಿವರಾಗಿ ನೇಮಕಗೊಂಡಿರುವ ರಾಜನಾಥ್ ಸಿಂಗ್ ಅವರು, ಶನಿವಾರ ಅಧಿಕಾರ ಸ್ವೀಕರಿಸಿದರು. ಬೆಳಗ್ಗೆಯೇ ತಮ್ಮ ಕಚೇರಿಗೆ ಆಗಮಿಸಿದ ಅವರನ್ನು ಇಲಾಖೆಯ ಸಹಾಯಕ ಸಚಿವರಾಗಿ ನೇಮಕಗೊಂಡಿರುವ ಶ್ರೀಪಾದ್ ನಾಯಕ್, ಇಲಾಖೆಯ ಕಾರ್ಯದರ್ಶಿ ಸಂಜಯ್ ಮಿತ್ರ ಹಾಗೂ ಇತರ ಹಿರಿಯ ಅಧಿಕಾರಿಗಳು ಹೂಗುತ್ಛ ನೀಡಿ ಸ್ವಾಗತಿಸಿದರು. ಅನಂತರ, ಸೇನಾಧಿಕಾರಿ ಬಿಪಿನ್ ರಾವತ್, ವಾಯುಪಡೆಯ ಮುಖ್ಯಸ್ಥ ಬಿ.ಎಸ್. ಧನೋವಾ ಹಾಗೂ ನೌಕಾಪಡೆಯ ನೂತನ ಮುಖ್ಯಸ್ಥ ಕರಂಬಿರ್ ಸಿಂಗ್ ಜತೆಗೆ ಸಚಿವರು ಸಮಾಲೋಚನೆ ನಡೆಸಿದರು. ಈ ಸಭೆಯಲ್ಲಿ ಕಾರ್ಯದರ್ಶಿ ಸಂಜಯ್ ಮಿತ್ರಾ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಸೌತ್ ಬ್ಲಾಕ್ಗೆ ಭೇಟಿ ನೀಡಿದಾಗ, ಅವರನ್ನು ಭೂಸೇನಾ ಮುಖ್ಯಸ್ಥ ಜ|ಬಿಪಿನ್ ರಾವತ್ ಹಾಗೂ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಆತ್ಮೀಯವಾಗಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ