ರಾಜು ಶ್ರೀ ವಾಸ್ತವ ಆರೋಗ್ಯದಲ್ಲಿ ಸುಧಾರಣೆ : ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದ ಕುಟುಂಬ
Team Udayavani, Aug 13, 2022, 7:55 AM IST
ನವದೆಹಲಿ : ಹಾಸ್ಯ ನಟ ರಾಜು ಶ್ರೀ ವಾಸ್ತವ ಅವರ ಆರೋಗ್ಯ ಸ್ಥಿತಿ ಸುಧಾರಣೆಯಲ್ಲಿದ್ದು, ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಆಗಸ್ಟ್ 10 ರಂದು ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದಿದ್ದ ಹಾಸ್ಯ ನಟನನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದರು. ಆ ಬಳಿಕ ಶ್ರೀವಾಸ್ತವ ಅವರ ಆರೋಗ್ಯ ಗಂಭೀರವಾಗಿದೆ ಎಂದು ಸುದ್ದಿ ಹರಡಲಾರಂಭಿಸಿದೆ ಇದಕ್ಕೆ ಸ್ಪಷ್ಟನೆ ನೀಡಿದ ಕುಟುಂಬ ಮೂಲಗಳು ರಾಜು ಶ್ರೀವಾಸ್ತವ ಅವರ ಅರೋಗ್ಯ ಸ್ಥಿತಿ ಸುಧಾರಿಸುತ್ತಿದೆ, ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ, ಅಲ್ಲದೆ ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ ಹಾಗಾಗಿ ಯಾರೂ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ಹೇಳಿದ್ದಾರೆ.
ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್ನಲ್ಲಿನ ಅಭಿನಯದಿಂದ ಜನಪ್ರಿಯವಾಗಿರುವ ಶ್ರೀವಾಸ್ತವ ‘ಮೈನೆ ಪ್ಯಾರ್ ಕಿಯಾ’, ‘ಬಾಜಿಗರ್’, ‘ಬೊಬ್ಬೆ ಟು ಗೋವಾ’ ಮತ್ತು ‘ಆಮ್ದಾನಿ ಅಥಾನಿ ಖರ್ಚಾ ರುಪಯ್ಯ’ ಚಿತ್ರಗಳಲ್ಲಿ ನಟಿಸಿದ್ದಾರೆ. ಶ್ರೀವಾಸ್ತವ ಅವರು ‘ಬಿಗ್ ಬಾಸ್’ ಸೀಸನ್ ಮೂರರಲ್ಲಿ ಕೂಡಾ ಭಾಗವಹಿಸಿದ್ದರು. ಪ್ರಸ್ತುತ ಶ್ರೀವಾಸ್ತವ ಅವರು ಉತ್ತರ ಪ್ರದೇಶ ಚಲನಚಿತ್ರ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದಾರೆ.
Raju Srivastava’s condition is stable, says family; urges fans to ignore rumours
Read @ANI Story | https://t.co/BdRcvalrLA#RajuSrivastava #RajuSrivastavaHealth #RajuSrivastavaHeartAttack pic.twitter.com/uqVsdcKbxf
— ANI Digital (@ani_digital) August 12, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು