ನಾಮಪತ್ರ ಸಲ್ಲಿಸಿದ ಹರಿವಂಶ ಸಿಂಗ್
Team Udayavani, Sep 10, 2020, 12:25 AM IST
ಇದೇ 14ರಿಂದ ಶುರುವಾಗಲಿರುವ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ಬುಧವಾರ, ರಾಜ್ಯ ಸಭಾ ಸ್ಪೀಕರ್ ವೆಂಕಯ್ಯ ನಾಯ್ಡು ಅಣಕು ಕಲಾಪ ನಡೆಸಿದರು.
ನವದೆಹಲಿ: ರಾಜ್ಯಸಭೆಯಲ್ಲಿ ಉಪ ಸಭಾಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿಯಾಗಿ ಜೆಡಿಯು ರಾಜ್ಯಸಭಾ ಸದಸ್ಯ ಹರಿವಂಶ ನಾರಾಯಣ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ. ಮೇಲ್ಮನೆಯಲ್ಲಿನ ಸಂಖ್ಯಾಬಲದ ಲೆಕ್ಕಾಚಾರ ಗಮನಿಸಿ ದಾಗ ಅವರೇ ಹುದ್ದೆಗೆ ಆಯ್ಕೆಯಾಗುವ ಸಾಧ್ಯತೆ ಅಧಿಕವಾಗಿದೆ.
245 ಸದಸ್ಯ ಬಲದ ರಾಜ್ಯಸಭೆ ಯಲ್ಲಿ ಸರ್ಕಾರದ ಪರವಾಗಿ 116 ಸದಸ್ಯರು ಇದ್ದಾರೆ. ಇದಲ್ಲದೆ, ಬಿಜು ಜನತಾ ದಳ, ವೈ.ಎಸ್.ಆರ್.ಕಾಂಗ್ರೆಸ್, ತೆಲಂಗಾಣ ರಾಷ್ಟ್ರ ಸಮಿತಿ ಸದಸ್ಯರು ಸರ್ಕಾರದ ಅಭ್ಯರ್ಥಿ ಪರವಾಗಿ ಬೆಂಬಲ ಸೂಚಿಸಲಿವೆ. ಕಾಂಗ್ರೆಸ್ ಇತರ ಪ್ರತಿಪಕ್ಷಗಳ ಜತೆಗೆ ಸೇರಿಕೊಂಡು ಉಪಸಭಾಪತಿ ಸ್ಥಾನಕ್ಕೆ ಅಭ್ಯರ್ಥಿಯನ್ನು ಇಳಿಸುವ ಬಗ್ಗೆ ಯೋಚಿಸುತ್ತಿದ್ದಂತೆಯೇ ಎನ್ಡಿಎ ವತಿಯಿಂದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.
ಇದೇ ವೇಳೆ, ಲೋಕಸಭೆಯಲ್ಲಿನ ಉಪ ಸಭಾ ಧ್ಯಕ್ಷ ಹುದ್ದೆಯನ್ನು ಸಂಸತ್ನ ಮುಂಗಾರು ಅಧಿವೇಶನದಲ್ಲಿಯೇ ಭರ್ತಿ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಅಧಿರ್ ರಂಜನ್ ಚೌಧರಿ ಒತ್ತಾಯಿ ಸಿದ್ದಾರೆ. ಜತೆಗೆ ಪ್ರತಿಪಕ್ಷಗಳಿಗೆ ಆ ಹುದ್ದೆಯನ್ನು ನೀಡಬೇಕು. ಇಂಥ ಒಂದು ಸಂಪ್ರದಾಯ ಹಿಂದಿನಿಂದಲೂ ಇದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!