ಧರಣಿನಿರತರಿಗೆ ಚಹಾ ತಂದ ವಿಶೇಷ ಅತಿಥಿ!

ಅಮಾನತಾದ ಸದಸ್ಯರಿಗೆ ರಾಜ್ಯಸಭೆ ಉಪಾಧ್ಯಕ್ಷರಿಂದ ಟೀ

Team Udayavani, Sep 23, 2020, 1:17 AM IST

ಧರಣಿನಿರತರಿಗೆ ಚಹಾ ತಂದ ವಿಶೇಷ ಅತಿಥಿ!

ಹೊಸದಿಲ್ಲಿ: ಸೋಮವಾರ ಕೃಷಿ ಮಸೂದೆಯ ಅಂಗೀಕಾರದ ವೇಳೆ ರಾಜ್ಯಸಭೆ ಉಪಸಭಾಧ್ಯಕ್ಷ ಹರಿವಂಶ್‌ ಸಿಂಗ್‌ರೊಂದಿಗೆ ಆಕ್ಷೇಪಾರ್ಹವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಟಿಎಂಸಿ ನಾಯಕ ಡೆರೆಕ್‌ ಒಬ್ರಿಯಾನ್‌ ಸೇರಿದಂತೆ 8 ಸದಸ್ಯರನ್ನು ಸಸ್ಪೆಂಡ್‌ ಮಾಡಿದ್ದು, ಅದನ್ನು ಖಂಡಿಸಿ ಅವರು ಅಹೋ ರಾತ್ರಿ ಧರಣಿ ನಡೆಸಿದ್ದು… ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮಂಗಳವಾರ ಬೆಳಗ್ಗೆ ಹರಿವಂಶ್‌ ಅವರೇ ಸ್ವತಃ ಚಹಾ ಮತ್ತು ಉಪಾಹಾರದೊಂದಿಗೆ ಧರಣಿನಿರತರ ಬಳಿ ಆಗಮಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಸಂಸತ್‌ ಭವನದ ಹೊರಗೆ ಸೋಮವಾರ ರಾತ್ರಿಯಿಡೀ ಧರಣಿ ಕುಳಿತಿದ್ದ ಸದಸ್ಯರ ಬಳಿಗೆ ಮಂಗಳವಾರ ಬೆಳಗ್ಗೆ ಹರಿವಂಶ್‌ ಚಹಾದೊಂದಿಗೆ ಬಂದಿದ್ದಾರೆ. ಆದರೆ, ಅವರು ನೀಡಿದ ಚಹಾವನ್ನು ಕೆಲವು ಸಂಸದರು ಸ್ವೀಕರಿಸಲು ನಿರಾಕರಿಸಿದ್ದು, “ರೈತರಿಗೆ ಮೋಸ ಮಾಡಲಾಗುತ್ತಿದೆ. ನಾವು ಮತಗಳ ವಿಭಜನೆಗೆ ಕೋರಿದೆವು. ಆದರೆ ನಮ್ಮನ್ನು ಸಂಪೂರ್ಣವಾಗಿ ನೀವು ನಿರ್ಲಕ್ಷಿಸಿ ದಿರಿ. ಈಗ ಸ್ನೇಹ ಸಂಪಾದಿಸುವ ಸಮಯ ವಲ್ಲ, ಅನ್ನದಾತರ ಹಕ್ಕುಗಳಿಗಾಗಿ ಹೋರಾ ಡುವ ಸಮಯ’ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಮೆಚ್ಚುಗೆ: ಹರಿವಂಶ್‌ ಅವರ ಈ ನಡೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿರುವ ಪ್ರಧಾನಿ ಮೋದಿ, “ಇದು ಅವರ ಹೃದಯ ವೈಶಾಲ್ಯತೆಯನ್ನು ತೋರಿಸಿದೆ. ಅವರ ಮುತ್ಸದ್ಧಿತನವು ಪ್ರಜಾಸತ್ತೆ ಯನ್ನು ಪ್ರೀತಿಸುವ ಪ್ರತಿಯೊಬ್ಬನಿಗೂ ಹೆಮ್ಮೆ ಉಂಟು ಮಾಡಿದೆ. ತಮ್ಮ ಮೇಲೆ ದಾಳಿ ನಡೆಸಿ, ಅವಮಾನಿಸಿದವರಿಗೆ ಚಹಾ ನೀಡುವ ಮೂಲಕ ಹರಿವಂಶ್‌ ಶ್ರೇಷ್ಠತೆ ಮೆರೆ ದಿದ್ದಾರೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಹರಿವಂಶ್‌ ಉಪವಾಸ: ಸೆ.20ರಂದು ರಾಜ್ಯಸಭೆಯಲ್ಲಿ ನನ್ನೊಂದಿಗೆ ಪ್ರತಿಪಕ್ಷಗಳ ನಾಯಕರು ವರ್ತಿಸಿದ ರೀತಿಯಿಂದ ಬಹ ಳಷ್ಟು ನೋವಾಗಿದೆ. ನಾನು ಮಂಗಳವಾರ 24 ಗಂಟೆ ಉಪವಾಸವಿರಲು ನಿರ್ಧರಿಸಿ ದ್ದೇನೆ. ಗದ್ದಲ ಎಬ್ಬಿಸಿದವರಲ್ಲಿ ಸ್ವಯಂ ಶುದ್ಧೀಕರಣದ ಭಾವನೆ ಮೂಡಲಿ ಎಂದು ಆಶಿಸುತ್ತೇನೆ ಎಂದು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಬರೆದ ಪತ್ರದಲ್ಲಿ ಹರಿವಂಶ್‌ ಹೇಳಿದ್ದಾರೆ.

ಖಾಲಿ ಹುದ್ದೆ ತುಂಬಿರಿ: ದೇಶದಲ್ಲಿ ನಿರು ದ್ಯೋಗ ತಾಂಡವವಾಡುತ್ತಿದೆ. ಸರಕಾರ, ಆರೋಗ್ಯ, ಶಿಕ್ಷಣ, ಪೊಲೀಸ್‌ ಇಲಾಖೆಯಲ್ಲಿ 20 ಲಕ್ಷ ಹುದ್ದೆ ಗಳು ಖಾಲಿಯಿದ್ದು, ಸರಕಾರ ಭರ್ತಿ ಮಾಡುತ್ತಿಲ್ಲ. ತುರ್ತಾಗಿ ಹುದ್ದೆ ಗಳಿಗೆ ನೇಮಕ ಪ್ರಕ್ರಿಯೆ ಆರಂಭಿಸ ಬೇಕು ಎಂದು ಕಾಂಗ್ರೆಸ್‌ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಖಾಸಗಿ ಕಂಪನಿಗಳು ರೈತರಿಂದ ಆಹಾರ ಧಾನ್ಯ ಖರೀದಿಸು ವಂತಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖೀಸು ವಂಥ ಹೊಸ ವಿಧೇಯಕವನ್ನು ಸರಕಾರ ಮಂಡಿಸಬೇಕು ಮತ್ತು 8 ಸದಸ್ಯರ ಅಮಾನತನ್ನು ವಾಪಸ್‌ ಪಡೆಯಬೇಕು.
ಗುಲಾಂ ನಬಿ ಆಜಾದ್‌, “ಕೈ’ ನಾಯಕ

ರಾಜ್ಯಸಭೆಯಲ್ಲಿ ತಮ್ಮ ವರ್ತನೆಗೆ ಸಂಬಂಧಿಸಿ 8 ಮಂದಿ ವಿಪಕ್ಷಗಳ ಸದಸ್ಯರು ಕ್ಷಮೆ ಕೋರಿದರಷ್ಟೇ ಅವರ ಅಮಾನತನ್ನು ವಾಪಸ್‌ ಬಗ್ಗೆ ಪರಿಶೀಲಿಸಬಹುದು.
ರವಿಶಂಕರ್‌ ಪ್ರಸಾದ್‌, ಕೇಂದ್ರ ಸಚಿವ

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.