ರಾಜ್ಯಸಭೆಯಲ್ಲೂ ಪ್ರತಿಧ್ವನಿಸಿದ ಹೈದರಾಬಾದ್ ರೇಪ್ ಅಂಡ್ ಮರ್ಡರ್ ಕೇಸ್; ಸಂಸದರ ಆಕ್ರೋಶ
Team Udayavani, Dec 2, 2019, 12:21 PM IST
ನವದೆಹಲಿ:ದೇಶಾದ್ಯಂತ ತೀವ್ರ ಆಕ್ರೋಶದ ಕಿಡಿಹಚ್ಚಿರುವ ಹೈದರಾಬಾದ್ ಪಶುವೈದ್ಯೆ ರೇಪ್ ಅಂಡ್ ಮರ್ಡರ್ ಪ್ರಕರಣದ ಬಗ್ಗೆ ಸೋಮವಾರ ರಾಜ್ಯಸಭೆಯಲ್ಲಿಯೂ ಪ್ರತಿಧ್ವನಿಸಿದೆ ಎಂದು ವರದಿ ತಿಳಿಸಿದೆ.
ಲೋಕಸಭೆಯ ಚಳಿಗಾಲದ ಅಧಿವೇಶನ ಸೋಮವಾರಕ್ಕೆ ಮೂರನೇ ವಾರಕ್ಕೆ ಕಾಲಿಟ್ಟಿದ್ದು, ರಾಜ್ಯಸಭೆಯಲ್ಲಿ ಹೈದರಾಬಾದ್ ಪಶು ವೈದ್ಯೆ ಮೇಲೆ ಅತ್ಯಾಚಾರ ಎಸಗಿ, ಬರ್ಭರವಾಗಿ ಹತ್ಯೆಗೈದಿರುವ ಘಟನೆ ಬಗ್ಗೆ ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಪ್ರಶ್ನಿಸಿದ್ದರು.
ಈ ದೇಶದಲ್ಲಿ ಮಕ್ಕಳು ಮತ್ತು ಮಹಿಳೆಯರು ಸುರಕ್ಷಿತವಾಗಿ ಬದುಕುವುದೇ ದುಸ್ತರವಾಗಿದೆ. ನಾಲ್ವರು ಕಾಮ ಪಿಶಾಚಿಗಳು ಹೈದರಾಬಾದ್ ನಲ್ಲಿ ಭೀಬತ್ಸ ಕೃತ್ಯ ಎಸಗಿದ್ದಾರೆ. ಅವರನ್ನೆಲ್ಲಾ ಡಿಸೆಂಬರ್ 31ರೊಳಗೆ ನೇಣುಗಂಬಕ್ಕೆ ಏರಿಸಬೇಕು. ಶೀಘ್ರವೇ ಶೀಘ್ರ ವಿಚಾರಣಾ ಕೋರ್ಟ್ ಅನ್ನು ಸ್ಥಾಪಿಸಬೇಕು. ನ್ಯಾಯ ವಿಳಂಬವಾಗುವುದು ನ್ಯಾಯವನ್ನು ನಿರಾಕರಿಸಿದಂತೆ ಎಂದು ಎಐಎಡಿಎಂಕೆ ಸಂಸದ ವಿಜಿಲಾ ಸತ್ಯಾನಂದ ಅಭಿಪ್ರಾಯವ್ಯಕ್ತಪಡಿಸಿದರು.
ಲೋಕಸಭೆಯಲ್ಲಿಯೂ ಪಶುವೈದ್ಯೆ ಹತ್ಯೆ ಪ್ರಕರಣದ ಬಗ್ಗೆ ಚರ್ಚೆ ನಡೆದಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಸಂಸದರು ಒತ್ತಾಯಿಸಿದರು. ಅಲ್ಲದೇ ಇಂತಹ ಪ್ರಕರಣಗಳು ಶೀಘ್ರವೇ ಇತ್ಯರ್ಥವಾಗುವ ಮೂಲಕ ಆರೋಪಿಗಳಿಗೆ ಗಲ್ಲುಶಿಕ್ಷೆಯಾಗುವಂತೆ ಕಾನೂನು ತಿದ್ದುಪಡಿ ತರುವಂತೆ ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂದ್ರಾ- ವರ್ಲಿ ಸೀ ಲಿಂಕ್ಗೆ 25,000 ಟನ್ ಗರ್ಡರ್ ಅಳವಡಿಕೆ
Telangana: ಪಿಯು ಫಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ