ಜಮ್ಮು-ಕಾಶ್ಮೀರ ಪುನರ್ ರಚನೆ ಮಸೂದೆ ರಾಜ್ಯಸಭೆಯಲ್ಲಿ ಪಾಸ್, ಲಡಾಖ್ ಕೇಂದ್ರಾಡಳಿತ ಪ್ರದೇಶ
Team Udayavani, Aug 5, 2019, 7:05 PM IST
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಿದ್ದ ಕಾಶ್ಮೀರ ಪುನರ್ ರಚನೆ ವಿಧೇಯಕ ಅಂಗೀಕಾರಗೊಂಡಿದೆ.
ಅಮಿತ್ ಶಾ ಮಂಡಿಸಿದ್ದ ವಿಧೇಯಕದ ಪ್ರಸ್ತಾಪವನ್ನು ಮಂಡಿಸಿದ್ದು, ಅದರ ಮೇಲೆ ಆಡಳಿತ ಮತ್ತು ವಿರೋಧ ಪಕ್ಷದ ಸಂಸದರು ಪರ, ವಿರೋಧ ಅಭಿಪ್ರಾಯ ಮಂಡಿಸಿದ್ದರು. ಅದಾದ ಬಳಿಕ ವಿಧೇಯಕವನ್ನು ಧ್ವನಿ ಮತದ ಮೂಲಕ ಮತಕ್ಕೆ ಹಾಕಲಾಯಿತು. ಕೆಲವು ಸದಸ್ಯರ ಬೇಡಿಕೆಯಂತೆ ಮತ ಚಲಾವಣೆಯೂ ನಡೆಯಿತು.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದುಗೊಳಿಸಿ, ಕಾಶ್ಮೀರ ಪುನರ್ ರಚನೆ ಕುರಿತು ಮಂಡಿಸಿದ ವಿಧೇಯಕಕ್ಕೆ ರಾಜ್ಯಸಭೆಯಲ್ಲಿ 125 ಸದಸ್ಯರು ಪರವಾಗಿ ಮತ ಚಲಾಯಿಸಿದ್ದು, 61 ಸದಸ್ಯರು ವಿರೋಧಿಸಿ ಮತ ಚಲಾಯಿಸಿದ್ದಾರೆ.
ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಒಳಗೊಂಡಿರುವ ಲಡಾಖ್ ಗೆ ಕೇಂದ್ರಾಡಳಿತ ಸ್ಥಾನಮಾನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್