Delhi CM ಕೇಜ್ರಿವಾಲ್ ನಿವಾಸದಲ್ಲಿ 15 ಬಾತ್ ರೂಮ್ಗಳು…; ಡಾ. ಸುಧಾಂಶು ವಾಗ್ದಾಳಿ
Team Udayavani, Aug 7, 2023, 4:28 PM IST
ಹೊಸದಿಲ್ಲಿ: “ರಾಷ್ಟ್ರೀಯ ರಾಜಧಾನಿ ವ್ಯಾಪ್ತಿ ದೆಹಲಿ (ತಿದ್ದುಪಡಿ) ವಿಧೇಯಕ 2023′ ಕುರಿತು ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಸಂಸದರ ನಡುವೆ ಕಲಾಪದಲ್ಲಿ ವಾಕ್ಸಮರ ಮುಂದುವರಿದಿದ್ದು, ಸೋಮವಾರ ಬಿಜೆಪಿ ಸಂಸದ ಡಾ. ಸುಧಾಂಶು ತ್ರಿವೇದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕಾಗಿ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಯನ್ನು ರಾಜ್ಯಸಭೆಯಲ್ಲಿ ಪರಿಗಣನೆಗೆ ಮತ್ತು ಅಂಗೀಕರಿಸಲು ಕೇಳಿಕೊಂಡರು.
ಡಾ. ಸುಧಾಂಶು ತ್ರಿವೇದಿ ರಾಜ್ಯಸಭೆಯಲ್ಲಿ ಮಾತನಾಡಿ, “2013 ರಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಆಗಿನ ಸಿಎಂ ಶೀಲಾ ದೀಕ್ಷಿತ್ ಅವರ ನಿವಾಸದಲ್ಲಿ 10 ಏರ್ ಕಂಡಿಷನರ್ಗಳು ಮತ್ತು ಬಾತ್ ರೂಮ್ನಲ್ಲಿಯೂ ಸಹ ಎಸಿ ಇತ್ತು ಎಂದು ಟ್ವೀಟ್ ಮಾಡಿ ವಿದ್ಯುತ್ ಬಿಲ್ಗೆ ಯಾರು ಪಾವತಿಸಿದ್ದಾರೆ ಎಂದು ಕೇಳಿದ್ದರು. ಈಗ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನಿವಾಸದಲ್ಲಿ, 15 ಸ್ನಾನಗೃಹಗಳು ಮತ್ತು ತಲಾ 1 ಕೋಟಿ ರೂ. ಮೌಲ್ಯದ ಪರದೆಗಳು ಇವೆ ಎಂದು ಹೇಳಿಕೆ ನೀಡಿದ್ದಾರೆ.
105 ಪುಟಗಳ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ, ದೆಹಲಿಯ ಮೇಲೆ ಕಾನೂನು ಜಾರಿಗೆ ತರುವುದರ ವಿರುದ್ಧ ಎಲ್ಲಿಯೂ ಏನನ್ನೂ ಉಲ್ಲೇಖಿಸಲಾಗಿಲ್ಲ. ಸುಪ್ರೀಂ ಕೋರ್ಟ್ ಆದೇಶದಲ್ಲಿ, ಪ್ಯಾರಾ 86, 95 ಮತ್ತು 164 F ನಲ್ಲಿ, ಸಂಸತ್ತಿಗೆ ದೆಹಲಿಗೆ ಕಾನೂನು ರೂಪಿಸಲು ಎಲ್ಲಾ ಹಕ್ಕುಗಳಿವೆ ಎಂದು ಉಲ್ಲೇಖಿಸಲಾಗಿದೆ ಎಂದು ತ್ರಿವೇದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ